ಬೆಂಗಳೂರು: ಆರ್.ಅಶೋಕ್ ಅವರ ಲಾಜಿಕ್ ಪ್ರಕಾರ ಸಿ.ಟಿ ರವಿ (C T Ravi) ಭಯೋತ್ಪಾದಕರಾ? ವಿ.ಸೋಮಣ್ಣ ಟೆರರಿಸ್ಟಾ? ಸುಮ್ಮನೆ ಮಾತಾಡ್ಬಾರ್ದು, ವಿರೋಧ ಪಕ್ಷದ ನಾಯಕರ ಮಾತಿಗೆ ತೂಕ ಇರಬೇಕು ಎಂದು ಪ್ರಿಯಾಂಕ್ ಖರ್ಗೆ (Priyank Kharge) ತಿರುಗೇಟು ನೀಡಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ (Bengaluru) ಮಾತನಾಡಿದ ಅವರು, ಅಶೋಕ್ ಲಾಜಿಕ್ ಇಲ್ಲದೆ ಸುಮ್ಮನೆ ಮಾತನಾಡಬಾರದು, ವಿರೋಧ ಪಕ್ಷದ ನಾಯಕರ ಮಾತಿಗೆ ತೂಕ ಇರಬೇಕು. ನಾವು ಟೆರರಿಸ್ಟಿನಿಂದ ಹೇಗೆ ಸಲಹೆ ತಗೋತಿವಿ? ಬಲವಾದ ಮೂಲ ಇದ್ರೆ ಅಮಿತ್ ಶಾಗೆ ದೂರು ಕೊಡಲಿ. 10 ವರ್ಷದಿಂದ ಅವರದೇ ಸರ್ಕಾರ ಇತ್ತಲ್ವಾ? ಭಯೋತ್ಪಾದನೆ ನಿರ್ಮೂಲನೆಗೆ ಏನು ಮಾಡಿದ್ದಾರೆ ಬೆಂಗಳೂರಿಗೆ ಪಾಕಿಸ್ತಾನಿಗಳು ಹೇಗೆ ಬರ್ತಾರೆ? ಇಸ್ಲಾಂ ಅಹಮದಾಬಾದ್ನಿಂದ್ ಏರ್ ಡ್ರಾಫ್ಟ್ ಆಗ್ತಿದ್ದಾರಾ? ನಮಗೆ ಇಲ್ಲಿ ಪಾಠ ಮಾಡ್ತಿರಾ. ಕೆಲಸಕ್ಕೆ ಬಾರದೇ ಇರುವ ವಿದೇಶಾಂಗ ಸಚಿವ ಜೈಶಂಕರ್ ಜೊತೆಗೆ ಮಾತಾಡಿ. ಹೆಂಗ್ರಿ ಭಾರತಕ್ಕೆ ಬಂದ್ರು ಇವರು? ನಮ್ಮ ಮೇಲೆ ಆರೋಪ ಮಾಡ್ತೀರಾ ಅಲ್ವಾ ಅದಕ್ಕೆ ದಾಖಲೆ ಕೊಡಿ ಎಂದು ಸವಾಲ್ ಹಾಕಿದ್ದಾರೆ.
ಕ್ಯಾಬಿನೆಟ್ನಲ್ಲಿ ಕೇಸ್ ವಾಪಸ್ ಪಡೆದ ಹಿನ್ನೆಲೆ, ಸರ್ಕಾರದ ಸಚಿವರು ಭಯೋತ್ಪಾದಕರು ಎಂಬ ಬಿಜೆಪಿ ನಾಯಕರ ಆರೋಪ ವಿಚಾರವಾಗಿ ಮಾತನಾಡಿ, 60 ಪ್ರಕರಣದಲ್ಲಿ 43 ಪ್ರಕರಣವನ್ನು ಕ್ಯಾಬಿನೆಟ್ ಉಪಸಮಿತಿಯ ನಿರ್ಧಾರದ ಮೇಲೆ ಕೇಸ್ ಪಡೆದಿದ್ದೇವೆ. ಎಲ್ಲವೂ ಕೂಲಂಕುಷವಾಗಿ ಚರ್ಚೆ ಮಾಡಿ ತೀರ್ಮಾನ ಮಾಡಿ ವಾಪಸ್ ಪಡೆದಿದ್ದೇವೆ. ಇದರಲ್ಲಿ ತಪ್ಪೇನಿದೆ? ವಿ.ಸೋಮಣ್ಣ ಅವರದು ನಾಲ್ಕೈದು ಕೇಸ್ ವಾಪಸ್ ಪಡೆದಿದ್ದೇವೆ. ಸಿ.ಟಿ ರವಿ ಹಾಗೂ ಸುಕುಮಾರ್ ಶೆಟ್ಟಿ ಅವರ ಕೇಸ್, ಮೈಸೂರು ಮಹಿಳಾ ಮೋರ್ಚಾ ಕೇಸ್ ವಾಪಸ್ ಪಡೆದಿದ್ದೇವೆ. ಇವರೆಲ್ಲರೂ ದೇಶದ್ರೋಹಿಗಳಾ? ಇವರೆಲ್ಲರೂ ಭಯೋತ್ಪಾದನೆ ನಡೆಸುತ್ತಾರಾ? ಏನಾದರೂ ಲಾಜಿಕ್ ಇರಬೇಕಲ್ವಾ? ಬಿಜೆಪಿಗೆ ಯಾವುದೇ ವಿಷಯ ಸಿಗುತ್ತಿಲ್ಲ. ಸುಮ್ಮನೆ ಹಿಟ್ ಅಂಡ್ ರನ್ ಮಾಡುತ್ತಾರೆ ಎಂದು ಕಿಡಿಕಾರಿದ್ದಾರೆ.