ಮೈಸೂರು: ತಂಗಿ ಅನ್ಯಧರ್ಮೀಯ ಯುವಕನನ್ನು ಲವ್ ಮಾಡುತ್ತಿದ್ದಳೆಂಬ ಒಂದೇ ಕಾರಣಕ್ಕೆ ಅಣ್ಣನೊಬ್ಬ ಆಕೆಯೊಂದಿಗೆ ತನ್ನ ತಾಯಿಯನ್ನೂ ಕೆರೆಗೆ ತಳ್ಳಿ ಕೊಂದ ದಾರುಣ ಘಟನೆ ಜಿಲ್ಲೆ ಹುಣಸೂರು ತಾಲ್ಲೂಕಿನ ಮರೂರು ಗ್ರಾಮದಲ್ಲಿ ಜರುಗಿದೆ. ಕೆರೆಯಲ್ಲಿ ಮುಳುಗಿ ಸತ್ತವರನ್ನು 19-ವರ್ಷ-ವಯಸ್ಸಿನ ಯುವತಿ ಧನುಶ್ರೀ ಮತ್ತು 43-ವರ್ಷ ವಯಸ್ಸಿನ ಅನಿತಾ ಎಂದು ಗುರುತಿಸಲಾಗಿದೆ. ಅವರನ್ನು ಕೆರೆಗೆ ತಳ್ಳಿದ ಆರೋಪ ಹೊತ್ತಿರುವ ಯುವಕನ ಹೆಸರು ನಿತಿನ್.
ಕಾಲೇಜಿನಲ್ಲಿ ಓದುತ್ತಿರುವ ಧನುಶ್ರೀ ಅನ್ಯಕೋಮಿನ ಯುವಕನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಇದು ಊರಿನಲ್ಲೂ ಸುದ್ದಿಯಾಗಿತ್ತು. ಅಣ್ಣ ನಿತಿನ್ ಇದನ್ನು ಆಕ್ಷೇಪಿಸಿದ್ದ. ಈ ವಿಚಾರದಲ್ಲಿ ಅಣ್ಣ ತಂಗಿಯರ ನಡುವೆ ವೈ ಮನಸ್ಸು ಬೆಳೆದಿತ್ತು. ಎಷ್ಟು ಹೇಳಿದರೂ ತನ್ನ ಮಾತನ್ನು ಕೇಳದೆ ಅನ್ಯ ಕೋಮಿನ ಯುವಕನ ಜತೆಗಿನ ಸುತ್ತಾಟವನ್ನೇ ಮುಂದುವರಿಸಿದ ತಂಗಿಯ ಮೇಲೆ ಸಿಟ್ಟುಗೊಂಡ ನಿತಿನ್ ಆಕೆಯ ಪಾಠ ಕಲಿಸಲು ಮುಂದಾಗಿದ್ದಾನೆ.
Health Tips: ಕಡಲೆಕಾಯಿ ಆರೋಗ್ಯಕ್ಕೆ ಉತ್ತಮ.! ಆದ್ರೆ ಈ ಸಮಸ್ಯೆ ಇರುವವರು ತಿಂದರೆ ಅಪಾಯ ತಪ್ಪಿದ್ದಲ್ಲ
ತಾಯಿ ಹಾಗೂ ತಂಗಿಯನ್ನು ಜತೆಯಾಗಿ ಬೈಕ್ನಲ್ಲಿ ಕರೆದೊಯ್ದ ನಿತಿನ್ ಒಂದು ಕೆರೆ ಬಳಿ ಬೈಕ್ ನಿಲ್ಲಿಸಿದ. ಮೊದಲು ತಂಗಿಯನ್ನು ಕೆರೆಗೆ ತಳ್ಳಿದ್ದಾನೆ. ಮಗಳನ್ನು ರಕ್ಷಿಸಲು ಬಂದ ತಾಯಿಯನ್ನೂ ಸಹ ಕೆರೆಗೆ ತಳ್ಳಿದ್ದಾನೆ ಎನ್ನಲಾಗಿದೆ. ಈ ವಿಷಯವನ್ನು ತಿಳಿಯುತ್ತಿದ್ದಂತೆಯೇ ಸಾರ್ವಜನಿಕರು ಸೇರಿದ್ದಾರೆ. ನಿತಿನ್ ಅಲ್ಲಿಂದ ತಪ್ಪಿಸಿಕೊಂಡಿದ್ದಾನೆ. ಇದೀಗ ಅಗ್ನಿಶಾಮಕ ಸಿಬ್ಬಂದಿ ಮೃತದೇಹ ಹೊರಗೆ ತೆಗೆದಿದ್ದಾರೆ. ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.