ಬೆಂಗಳೂರು: ʻಅವರಿಗೆ ಕೊಡಿ ಇವರಿಗೆ ಕೊಡಿ ಎನ್ನುವುದಕ್ಕೆ ಸಿಎಂ ಹುದ್ದೆ (Chief Minister) ಅದೇನು ಕಡಲೆಪುರಿನಾ? ಅದು ನನ್ನ ಕೈಯ್ಯಲ್ಲೂ ಇಲ್ಲ, ಧರ್ಮಗುರುಗಳ ಕೈಯ್ಯಲ್ಲೂ ಇಲ್ಲ. ಶಾಸಕರ ಬೆಂಬಲ ಕ್ರೋಢಿಕರಿಸಿಯೇ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾರೆ ಎಂದು ಸಮಾಜ ಕಲ್ಯಾಣ ಸಚಿವ ಹೆಚ್ಸಿ ಮಹಾದೇವಪ್ಪ (HC Mahadevappa) ಹೇಳಿದ್ದಾರೆ.
ನನ್ನ ಹೆಂಡತಿಗೆ ಗಿಫ್ಟ್ ಆಗಿ ಬಂದಿದ್ದು ಮುಡಾ ಸೈಟ್: ಸಿಎಂ ಸಿದ್ದರಾಮಯ್ಯ!
![Demo](https://ainlivenews.com/wp-content/uploads/2023/12/spoorthi-1.jpg)
ಸಿಎಂ, ಡಿಸಿಎಂ, ಅಧ್ಯಕ್ಷ ಹುದ್ದೆಯ ಬಗ್ಗೆ ಯಾರೂ ಬಹಿರಂಗ ಹೇಳಿಕೆ ನೀಡಬಾರದು. ಈ ರೀತಿ ಹೇಳಿಕೆ ನೀಡಿದವರಿಗೆ ನೋಟಿಸ್ ನೀಡಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಎಚ್ಚರಿಕೆ ನೀಡಿದ ಮರು ದಿನವೇ ಸಿಎಂ ಆಪ್ತ ಮಹಾದೇವಪ್ಪ ಈಗ ಬಹಿರಂಗವಾಗಿಯೇ ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ್ದಾರೆ.
Mallikarjun Kharge: ಕಳೆದ ಬಾರಿಯಂತೆ ರಾಷ್ಟ್ರಪತಿಗಳ ಭಾಷಣದಲ್ಲಿ ದೂರದೃಷ್ಟಿ ಇಲ್ಲ: ಮಲ್ಲಿಕಾರ್ಜುನ್ ಖರ್ಗೆ
ವಿಶೇಷ ಏನೆಂದರೆ ಈ ಮೊದಲು ಮಳವಳ್ಳಿಯ ಶಾಸಕ ನರೇಂದ್ರಸ್ವಾಮಿ (Narendraswamy) ಅವರು ಸಿದ್ದರಾಮಯ್ಯ ಅವರನ್ನು ಸಿಎಂ ಮಾಡಿದ್ದು ಶಾಸಕರು ಎಂದು ಹೇಳಿಕೆ ನೀಡಿ ಸಿಎಂ ಪರ ಬ್ಯಾಟಿಂಗ್ ಮಾಡಿದ್ದರು. ಈಗ ಮಹಾದೇವಪ್ಪನವರು ಸಿಎಂ ವಿಚಾರ ಪ್ರಸ್ತಾಪಿಸುವ ಮೂಲಕ ಡಿಕೆ ಶಿವಕುಮಾರ್ ಆದೇಶಕ್ಕೂ ಡೋಂಟ್ ಕೇರ್ ಅಂದಿದ್ದಾರೆ.
![](https://ainlivenews.com/wp-content/uploads/2024/01/Ad-Banner-copy-scaled.jpg)