ಬೆಂಗಳೂರು: ಬಿಜೆಪಿ ಅಧೋಗತಿಗೆ ಹೋಗುವುದು ಶತಸಿದ್ಧ ಎಂದು ಲಕ್ಷ್ಮಣ್ ಸವದಿ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ನಾನು ಮತ್ತು ಶೆಟ್ಟರ್ ಅವರು ಬಿಜೆಪಿ ಬಿಡುವಾಗ ಮಾಧ್ಯಮಗಳ ಮುಂದೆ ಕೆಲ ಮಾತುಗಳನ್ನು ಹೇಳಿದ್ವಿ ಪಕ್ಷ ಬಿಡಬಾರದಾಗಿತ್ತು.ಪಕ್ಷ ಎಲ್ಲವೂ ಕೊಟ್ಟಿದೆ ಎಂದು ಅವರ ಅಭಿಪ್ರಾಯ ಹೇಳಿದ್ದರು.ನಾನು ಸಹ ಅ ಸಂದರ್ಭದಲ್ಲಿ ಹೇಳಿದ್ದೆ ಈಶ್ವರಪ್ಪ ಅವರು ಹಿರಿಯ ನಾಯಕರು ಲೋಕಸಭೆ ಚುನಾವಣೆ ಘೋಷಣೆ ಆಗಿ, ಅಭ್ಯರ್ಥಿಗಳು ಘೋಷಣೆ ಆದ ಮೇಲೆ ಈಶ್ವರಪ್ಪನವರು ಏನು ಹೇಳುತ್ತಾರೆ ಎನ್ನುವುದರ ಮೇಲೆ ತೀರ್ಮಾನ ಮಾಡೋಣ ಎಂದಿದ್ದೆ. ನಾನು ಹೇಳಿದ್ದು ಇವತ್ತು ಸತ್ಯವಾಗಿದೆ ಎಂದರು.
ಮೂರು ಮದುವೆಯಾಗಿದ್ದರು ಮುಚ್ಚಿಟ್ಟು 50ನೇ ವಯಸ್ಸಿನಲ್ಲಿ 17 ವರ್ಷದ ನಟಿಯನ್ನು ವರಿಸಿದ ಟೈಗರ್ ಪ್ರಭಾಕರ್
ಬಿಜೆಪಿಯಲ್ಲಿ ಹಿರಿತನ, ಸಂಘಟನೆ ಇರುವವರು, ಪಕ್ಷ ಬಲ ತರುವವರ ಅವಶ್ಯಕತೆ ಅವರಿಗಿಲ್ಲ.ಯಾವ ಆಲೋಚನೆ ಮಾಡ್ತಾ ಇದ್ದಾರೆ ಚರ್ಚೆ ಮಾಡೋದು ಅನಾವಶ್ಯಕ.ಒಟ್ಟಾರೆ ಬಿಜೆಪಿ ಅಧೋಗತಿಗೆ ಹೋಗುವುದು ಶತಸಿದ್ಧ ಎಮದು ಕಿಡಿಕಾರಿದ್ದರು.
ಲೋಕಸಭೆ ಚುನಾವಣೆ ಬಳಿಕ ನೋಡಿ ಮೋದಿಯವರು ಪ್ರಧಾನ ಮಂತ್ರಿ ಆಗಲಿ ಎಂದು ನಾವು ಸುಮ್ಮನಿದ್ದೇವೆ. ಆಮೇಲೆ ಇವರಿಗೆ ಬುದ್ಧಿ ಕಲಿಸುತ್ತೇವೆ ಎಂದು ಕೆಲವರು ಹೇಳುತ್ತಿದ್ದಾರೆ ಈಗ ಒನ್ ಬೈ ಒನ್ ಶುರುವಾಗಿದೆ ಇನ್ನು ಜನ ಇನ್ನೂ ಕೆಲವರ್ ಕ್ಯೂ ಅಲ್ಲಿದ್ದರು. ಈಶ್ವರಪ್ಪನವರನ್ನ ತಳ್ಳಿದ್ರು ಸದಾನಂದ ಗೌಡರನ್ನು ತಳ್ಳಿದ್ರು ಇನ್ನೂ ಕೆಲ ನಂಬರ್ ಗಳಿದ್ದಾವೆ ಅವರೆಲ್ಲ ಖುಷಿಗಳಿದ್ದಾರೆನಮಗೇನಿಲ್ಲ ಎಲ್ಲವೂ ಬೇರೆಯವರಿಗೆ ಎಂಬ ರೀತಿಯಲ್ಲಿ ಖುಷಿಯಾಗಿದ್ದಾರೆ ಅವರ ನಂಬರ್ ಬಂದಾಗ ಗೊತ್ತಾಗಲಿದೆ ಎಂದು ಹೇಳಿದ್ದರು.