ಹುಬ್ಬಳ್ಳಿ: ಅಂಜಲಿ ಕೊಲೆ ಮಾಡಿದ್ದಲ್ಲದೇ ಮತ್ತೊಂದು ಕೊಲೆ ಮಾಡಲು ಹೋಗಿ ಕಿರಾತಕ ವಿಶ್ವ ಈಗ ಅರೆಸ್ಟ್ ಆಗಿದ್ದಾನೆ. ಅಂಜಲಿಯನ್ನು ಹತ್ಯೆ ಮಾಡಿದ ಬಳಿಕ ವಿಶ್ವ ಪರಾರಿಯಾಗಿ ದಾವಣಗೆರೆ ರೈಲಿನಲ್ಲಿ ಪ್ರಯಾಣ ಮಾಡುತ್ತಿದ್ದ. ಈ ವೇಳೆ ರೈಲಿನಲ್ಲಿ ಮಹಿಳೆ ಜೊತೆ ಗಲಾಟೆ ಮಾಡಿ ಸಿಟ್ಟಾಗಿ ಚಾಕು ಹಾಕಲು ಮುಂದಾಗಿದ್ದ.ಈ ವಿಚಾರ ತಿಳಿಯುತ್ತಿದ್ದಂತೆ ಪ್ರಯಾಣಿಕರು ಆತನಿಗೆ ರೈಲಿನಲ್ಲೇ ಹಿಗ್ಗಾಮುಗ್ಗಾ ಥಳಿಸಿದ್ದರು.
ಇಸ್ರೇಲ್ ಕೃಷಿ ಮಾದರಿ: ನಮ್ಮ ರೈತರ ಸಂಕಷ್ಟ ದೂರ ಮಾಡುವುದೇ?
ಜನರಿಂದ ತಪ್ಪಿಸಿಕೊಳ್ಳಲು ವಿಶ್ವ ರೈಲಿನಿಂದ ಜಿಗಿದಿದ್ದ. ಹಳಿಯಲ್ಲಿ ಬಿದ್ದು ಗಾಯಗೊಂಡಿದ್ದ ಈತನನ್ನು ದಾವಣಗೆರೆ ರೈಲ್ವೇ ಪೊಲೀಸರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ವೇಳೆ ವಿಶ್ವನ ವಿಳಾಸ ಇತ್ಯಾದಿ ಮಾಹಿತಿಗಳನ್ನು ಪರಿಶೀಲಿಸಿದಾಗ ಈತನೇ ಅಂಜಲಿಯನ್ನು ಕೊಲೆ ಮಾಡಿದ ಆರೋಪಿ ಎನ್ನುವುದು ಪೊಲೀಸರಿಗೆ ದೃಢಪಡುತ್ತದೆ. ಈಗ ವಿಶ್ವನನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.
ಮೈಸೂರಿನಲ್ಲಿ ಕೆಲಸ ಮಾಡುತ್ತಿದ್ದ ಆರೋಪಿ
ಆರೋಪಿ ಗಿರೀಶ್ ಮೈಸೂರಿನ ಮಹಾರಾಜ್ ಹೋಟೆಲ್ನಲ್ಲಿ ಕೆಲಸ ಮಾಡುತ್ತಿದ್ದ. ಹುಡುಗಿ ಅಂಜಲಿ ಮತ್ತು ಆರೋಪಿ ಪರಸ್ಪರ ಪ್ರೀತಿಸುತ್ತಿದ್ದರು. 15 ದಿನಗಳ ಹಿಂದೆ ದೇವಸ್ಥಾನದಲ್ಲಿ ಮದುವೆಯಾಗಿದ್ದಾಗಿಯೂ ಕೆಲವು ಮೂಲಗಳು ಮಾಹಿತಿ ನೀಡಿವೆ. ವಾರದ ಮುಂಚೆ ಯುವತಿ 2 ಸಾವಿರ ರೂಪಾಯಿ ಹಣ ಕೇಳಿದ್ದಳು. ಗಿರೀಶ್ ಒಂದು ಸಾವಿರ ರೂಪಾಯಿ ಪೋನ್ ಪೇ ಮಾಡಿದ್ದ. ಆ ನಂತರ ಗಿರೀಶನ ನಂಬರ್ ಅನ್ನು ಅಂಜಲಿ ಬ್ಲಾಕ್ ಲಿಸ್ಟ್ ಮಾಡಿದ್ದಳು. ಫೋನ್ ಕರೆ ಕೂಡ ಸ್ವೀಕರಿಸುತ್ತಿರಲಿಲ್ಲ.
ಆ ನಂತರ ಆರೋಪಿ ಸಿಟ್ಟಿಗೆದ್ದು ಮೈಸೂರಿನಿಂದ ಹುಬ್ಬಳ್ಳಿ ಗೆ ಬಂದು 4.30 ರ ಸುಮಾರಿಗೆ ಕೊಲೆ ಮಾಡಿದ್ದಾನೆ. ಅಲ್ಲಿಂದ ಹುಬ್ಬಳ್ಳಿ ಹೊಸ ಬಸ್ ಸ್ಟ್ಯಾಂಡ್ಗೆ ಬಂದು ಹಾವೇರಿಗೆ ಬಂದಿದ್ದ. ಹಾವೇರಿಯಿಂದ ಮೈಸೂರಿಗೆ ರೈಲು ಹತ್ತಿದ್ದ. ಮಧ್ಯದಲ್ಲಿ ಬಿಹಾರ ವ್ಯಕ್ತಿಯೊಬ್ಬನ ಮೊಬೈಲ್ ನಲ್ಲಿ ಪೋಟೋ ನೋಡಿ ಮೈಸೂರಿಗೆ ವಾಪಸ್ ಹೋಗಿ ಮಹಾರಾಜ್ ಹೋಟೆಲ್ನಲ್ಲಿ ಮಲಗಿದ್ದ. ಆ ನಂತರ ಮೈಸೂರಿನಿಂದ ಹುಬ್ಬಳ್ಳಿಗೆ ವಾಪಸ್ ಆಗಲು ಬರುತ್ತಿದ್ದಾಗ ರೈಲ್ವೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
![](https://ainlivenews.com/wp-content/uploads/2024/01/Ad-Banner-copy-scaled.jpg)