ಬೆಂಗಳೂರು: ಹಿಂದೂಗಳ ತೇಜೋವಧೆಗೆ ಸದನ ಬಳಸಿಕೊಳ್ಳುತ್ತಿರುವುದು ಸರಿಯಲ್ಲ ಎಂದು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra) ಕಿಡಿಕಾರಿದ್ದಾರೆ
ಅವರಿಗೆ ಕೊಡಿ ಇವರಿಗೆ ಕೊಡಿ ಎನ್ನುವುದಕ್ಕೆ ಸಿಎಂ ಹುದ್ದೆ ಕಡಲೆಪುರಿನಾ?: ಸಚಿವ ಹೆಚ್ಸಿ ಮಹಾದೇವಪ್ಪ
![Demo](https://ainlivenews.com/wp-content/uploads/2023/12/spoorthi-1.jpg)
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ಸುಳ್ಳು ಹೇಳುತ್ತಾ ದೇಶಾದ್ಯಂತ ಓಡಾಡಿದ್ರು. ಈಗ ವಿಪಕ್ಷ ನಾಯಕನ ಸ್ಥಾನಕ್ಕೂ ರಾಹುಲ್ ಧಕ್ಕೆ ತರುವ ಕೆಲಸ ಮಾಡಿದ್ದಾರೆ. ಹಿಂದೂಗಳು ಹಿಂಸಾಚಾರ, ದ್ವೇಷದಲ್ಲಿ ಹಗಲಿರುಳು ನಿರತರಾಗಿದ್ದಾರೆ ಅಂತ ಉಲ್ಲೇಖ ಮಾಡಿದ್ದಾರೆ. ಈ ಮೂಲಕ ರಾಹುಲ್ ಗಾಂಧಿಯವರು ದೇಶದ ಅಸಂಖ್ಯಾತ ಹಿಂದೂಗಳಿಗೆ ತೇಜೋವಧೆ ಮಾಡುವ ಕೆಲಸ ಮಾಡಿದ್ದಾರೆ. ನಿನ್ನೆ ಅಗ್ನಿವೀರ್, ರೈತರು, ಅಯೋಧ್ಯೆ ಮತ್ತು ಮೈಕ್ರೋ ಫೋನ್ ಬಗ್ಗೆ ಮಾತಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ನನ್ನ ಹೆಂಡತಿಗೆ ಗಿಫ್ಟ್ ಆಗಿ ಬಂದಿದ್ದು ಮುಡಾ ಸೈಟ್: ಸಿಎಂ ಸಿದ್ದರಾಮಯ್ಯ!
ಸುಳ್ಳು ಹೇಳಿ ಅಕ್ಷಮ್ಯ ಅಪರಾಧ ಮಾಡಿದ್ದಾರೆ. ರಾಹುಲ್ ಗಾಂಧಿ ದೇಶದ ಹಿಂದೂಗಳ ಕ್ಷಮೆ ಯಾಚಿಸಬೇಕು. ಅವರನ್ನು ಸುಳ್ಳು ಹೇಳಿ ಓಡಿಹೋಗಲು ಬಿಡಲ್ಲ. ಸದನದಲ್ಲಿ ಹಿಂದೂಗಳಿಗೆ ರಾಹುಲ್ ಗಾಂಧಿ ಅಪಮಾನ ಮಾಡಿದ್ದಾರೆ. ನೂರರ ಗಡಿ ದಾಟಲಾಗದ ಕಾಂಗ್ರೆಸ್ ನಾಯಕ ರಾಹುಲ್ ವಿಪಕ್ಷ ನಾಯಕ ಆಗಿ ಮನಸೋ ಇಚ್ಛೆ ಮಾತಾಡಲು ಸದನ ಬಳಸಿಕೊಳ್ತಿದ್ದಾರೆ. ಹಿಂದೂಗಳ ತೇಜೋವಧೆಗೆ ಸದನ ಬಳಸಿಕೊಳ್ತಿರೋದು ಸರಿಯಲ್ಲ ಎಂದರು.
![](https://ainlivenews.com/wp-content/uploads/2024/01/Ad-Banner-copy-scaled.jpg)