ಚಿತ್ರದುರ್ಗ: ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಕೊಲೆ ಮಾಡಿದ ಆರೋಪದಲ್ಲಿ ಜೈಲು ಸೇರಿದ ನಟ ದರ್ಶನ್ನ್ನು ನೋಡಿಕೊಂಡು ಬಂದಿದ್ದ ನಟ ವಿನೋದ್ ರಾಜ್, ಮೂರು ದಿನಗಳ ಅಂತರದಲ್ಲಿ ಕೊಲೆಯಾದ ರೇಣುಕಾಸ್ವಾಮಿ ಮನೆಗೆ ತೆರಳಿ ಆತನ ಹೆಂಡತಿ ಸಹನಾಗೆ ಸಾಂತ್ವನ ಹೇಳಿ 1 ಲಕ್ಷ ರೂ. ಚೆಕ್ ಸಹಾಯಧನ ನೀಡಿದ್ದಾರೆ.
ರೇಣುಕಸ್ವಾಮಿ ತಂದೆ ಕಾಶಿನಾಥ್ ಶಿವನಗೌಡ ಮಾತನಾಡಿ, ನಾವು ಸಂಧಾನಕ್ಕೆ ಹೊರಟಿದ್ದೇನೆ ಅಂತ ಪ್ರಚಾರ ಸರಿಯಲ್ಲ. ಮಗನ ಕಳೆದುಕೊಂಡು ಕರಳು ಕಿತ್ತು ಬರ್ತಿದೆ. ಈ ಪ್ರಕರಣದಿಂದ ನಾವು ನೊಂದಿದ್ದೇವೆ. ನಮ್ಮ ತಾಯಿಗೆ 98 ವರ್ಷವಾಗಿದೆ. ನಮ್ಮ ಇಡೀ ಕುಟುಂಬವೇ ಸಂಕಷ್ಟದಲ್ಲಿದೆ.
ವೈದ್ಯಲೋಕಕ್ಕೆ ಅಚ್ಚರಿ! ಪ್ರತಿ ಶನಿವಾರ ಮಿಸ್ ಮಾಡದೆ ಈ ವ್ಯಕ್ತಿ ಎಲ್ಲೇ ಇದ್ರೂ ಹೋಗಿ ಕಚ್ಚುತ್ತೆ ಈ ಹಾವು!
ನಮ್ಮ ಮಗ ನಿತ್ಯ ಅಜ್ಜಿಗೆ ಆರೈಕೆ ಮಾಡುತ್ತಿದ್ದನು. ಮಗನ ಕೊಂದ ಆರೋಪಿಗಳು ಯಾರು? ಅಂತ ನಮಗೆ ಗೊತ್ತಿಲ್ಲ. ಪ್ರಕರಣದ ಆರೋಪಿಗೆ ತಕ್ಕ ಶಿಕ್ಷೆ ಆಗಬೇಕು. ವಿನೋದ್ ರಾಜ್ ತಾಯಿ ಬಗ್ಗೆ ಅಪಾರ ಗೌರವವಿದೆ. ಅವರ ದೈವಭಕ್ತಿ ಬಗ್ಗೆ ಕೇಳಿದ್ದೇವೆ. ವಿನೋದ ರಾಜ್ ಕುಮಾರ್ ಬಂದಿದ್ದು ಸಮಾಧಾನ ತಂದಿದೆ ಎಂದು ಹೇಳಿದರು.