ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿಯ ಶ್ರೀ ಶಿವದಾಸಿಮಯ್ಯ ಸಮುದಾಯ ಭವನದಲ್ಲಿ ಶ್ರೀನಿಧಿ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸೈಟಿಯ ಶ್ರೀನಿಧಿ ರಜತ್ ಮಹೋತ್ಸವ ಕಾರ್ಯಕ್ರಮ ನಡೆಯಿತು. ನಮ್ಮ ಆರೋಗ್ಯ ಸದೃಢವಾಗಿರಬೇಕಾದರೆ ನಮ್ಮ ಸುತ್ತಮುತ್ತಲಿರುವ ಪರಿಸರ ಸುಂದರವಾಗಿರಬೇಕು.
ದಿನನಿತ್ಯ ಮನೆಯಲ್ಲಿ ತಯಾರಾಗುವಂಥ ಕಸಗಳನ್ನ ಎಲ್ಲೆಂದರಲ್ಲಿ ಬಿಸಾಡಿ ಒಗಿಯುವುದರಿಂದ ನಮ್ಮ ಪರಿಸರ ಹಾಳಾಗುತ್ತದೆ ಪರಿಸರ ಹಾಳಾದರೆ ನಮ್ಮ ಆರೋಗ್ಯ ಹಾದಿಗೆಡುತ್ತದೆ ಆದ್ದರಿಂದ ಪ್ರತಿಯೊಬ್ಬರೂ ಕಸವನ್ನು ನಗರಸಭೆಯ ಗಾಡಿಗಳಲ್ಲಿ ಹಾಕಿ ಸುಂದರ ಪರಿಸರ ವಾತಾವರಣವನ್ನು ನಿರ್ಮಿಸಿ ಎಂದು ಪರಮ ಪೂಜ್ಯ ಶ್ರೀ ನಿಜಲಿಂಗೇಶ್ವರ ಮಹಾಸ್ವಾಮಿಗಳು ದುರದುಂಡೇಶ್ವರ ಸಿದ್ಧಸಂಸ್ಥಾನ ಮಠ ನಿಡಸೋಸಿ ಹೇಳಿದರು.
ಇದೇ ಸಂದರ್ಭದಲ್ಲಿ ಪರಮಪೂಜ್ಯ ಶ್ರೀ ಗುರುಸಿದ್ದೇಶ್ವರ ಮಹಾಸ್ವಾಮಿಗಳು ಶ್ರೀ ಗುರುದೇವ ಬ್ರಹ್ಮಾನಂದ ಮಠ ರಬಕವಿ. ಅಧ್ಯಕ್ಷತೆ ಮಲ್ಲಿಕಾರ್ಜುನ ನಾಶಿ ಅಧ್ಯಕ್ಷರು ಶ್ರೀನಿಧಿ ಅರ್ಬನ್ ಕೋ ಆಫ್ ಕ್ರೆಡಿಟ್ ಸೊಸೈಟಿ. ಡಾ ಶಂಭು ಬಳೆಗಾರ ನಿವೃತ್ತ ಪ್ರಧ್ಯಾಪಕರು ಜಾನಪದ ಸಾಹಿತ್ಯ. ರಬಕವಿ ಬನಹಟ್ಟಿ ತಹಶೀಲ್ದಾರ್ ಗಿರೀಶ ಸ್ವಾದಿ. ಉಪಾಧ್ಯಕ್ಷರು ಮಲ್ಲಿಕಾರ್ಜುನ ಸಾಬೋಜಿ ಮತ್ತು ಆಡಳಿತ ಮಂಡಳಿ ಸದಸ್ಯರು ಸೇರಿದಂತೆ ಮುಂತಾದವರು ಪಾಲ್ಗೊಂಡಿದ್ದರು.
ಪ್ರಕಾಶ ಕುಂಬಾರ
ಬಾಗಲಕೋಟೆ