ಬೆಂಗಳೂರು;– ತಮಿಳುನಾಡಿಗೆ ಕೂಡಲೇ ನೀರು ನಿಲ್ಲಿಸಿ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಗುಡುಗಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಈಗ ನೀರು ಬಿಡುವ ಪರಿಸ್ಥಿತಿಯನ್ನು ತಂದುಕೊಂಡಿದ್ದು ರಾಜ್ಯ ಸರ್ಕಾರವೇ ಆಗಿದೆ. ಸುಪ್ರೀಂ ಕೋರ್ಟ್ ಆದೇಶಕ್ಕೆ ಮುಂಚೆ ನೀರು ಬಿಟ್ಟು ತನ್ನ ಕೈಯನ್ನು ತಾನೇ ಕಟ್ಟಿಕೊಂಡಿದೆ. ಈಗ ಕಾನೂನು ಹೋರಾಟ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದಂತೆ ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸೆಕ್ಸ್ ನೀರು ಬಿಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶ ಮಾಡಿರುವುದು ಇದೊಂದು ಪಾಲನೆ ಮಾಡಲು ಸಾಧ್ಯವಿಲ್ಲದ ಒಂದು ಆಜ್ಞೆ.

ರಾಜ್ಯ ಸರ್ಕಾರ ಕೂಡಲೇ ಸುಪ್ರೀಂ ಕೋರ್ಟ್ಗೆ ಹೋಗಿ ನೀರನ್ನು ಬಿಡಲು ಸಾಧ್ಯವಿಲ್ಲದ ಕಾರಣವನ್ನು ಮನವರಿಕೆ ಮಾಡಿಕೊಡಬೇಕು. ಈ ಆಜ್ಞೆ ಬರುವ ಮುಂಚೆ ನೀರು ಬಿಡಲು ಪ್ರಾರಂಭ ಮಾಡಿರುವ ರಾಜ್ಯ ಸರ್ಕಾರ ತನ್ನ ಕೈಯನ್ನು ತಾನೇ ಕಟ್ಟಿಸಿಕೊಂಡಿದೆ. ಕೂಡಲೇ ನೀರು ನಿಲ್ಲಿಸಿ ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯದ ಜನತೆಗೆ ನ್ಯಾಯ ಒದಗಿಸಲು ಕಾನೂನಾತ್ಮಕ ಹೋರಾಟ ಮಾಡಬೇಕು’ ಎಂದು ಬಸವರಾಜ ಬೊಮ್ಮಾಯಿ ಒತ್ತಾಯಿಸಿದ್ದಾರೆ.
