ಬೆಂಗಳೂರು:- ಜೈಲಲ್ಲಿ ದೇವೇರಾಜೇಗೌಡರಿಗೆ ಜೀವ ಭಯ ಇರುವುದು ನಿಜ ಎಂದು ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಮಕ್ಕಳನ್ನು ಮನೆಯಲ್ಲೇ ಬಿಟ್ಟು ಹೋಗುತ್ತಿದ್ದೀರಾ..!? ಪೋಷಕರೇ ನೀವು ಓದಲೇಬೇಕಾದ ಸುದ್ದಿ..!
ಈ ಸಂಬಂಧ ಮಾತನಾಡಿದ ಅವರು,ಜೈಲಿನಲ್ಲಿ ವಕೀಲ ದೇವೇರಾಜೇಗೌಡರಿಗೆ ಜೀವ ಭಯ ಇದೆ ಎಂಬ ಮಾಜಿ ಶಾಸಕ ಸುರೇಶ್ ಗೌಡ ಹೇಳಿಕೆಯನ್ನು ಸಮರ್ಥಿಸಿಕೊಂಡರು. ಈ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ದೇವರಾಜೇಗೌಡ ಅವರಿಗೆ ಜೈಲಿನಲ್ಲಿ ಜೀವ ಬೆದರಿಕೆ ಇರಬಹುದು. ಈ ಸರ್ಕಾರದಲ್ಲಿ ಇರುವ ಬಹಳ ಜನರು ಯಾವ ಹಿನ್ನೆಲೆಯಿಂದ ಬಂದಿದ್ದಾರೆ ಎನ್ನುವ ಹಿನ್ನೆಲೆಯನ್ನು ನೋಡಿದರೆ ನಿಜ ಇರಬಹುದು. ಹೀಗಾಗಿ ನಮ್ಮ ಪಕ್ಷದ ಮಾಜಿ ಶಾಸಕ ಸುರೇಶ್ ಗೌಡ ಅವರು ಹೇಳಿರಬಹುದು ಎಂದು ಕುಮಾರಸ್ವಾಮಿ ಸಮರ್ಥನೆ ಮಾಡಿಕೊಂಡರು
ಆಡಿಯೊ ಸಂಭಾಷಣೆಯಲ್ಲಿ ಡಿ.ಕೆ. ಶಿವಕುಮಾರ್ ಪಾತ್ರ ಸ್ಪಷ್ಟವಾಗಿದೆ. ಅವರು ರಾಜೀನಾಮೆ ಕೊಡಲೇಬೇಕು. ಇಲ್ಲವಾದರೆ ಸಿಎಂ ಅವರೇ ಸಂಪುಟದಿಂದ ವಜಾ ಮಾಡಬೇಕು ಎಂದು ಎಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದರು
ಪೆನ್ ಡ್ರೈವ್ ಸೃಷ್ಟಿಕರ್ತ ಕಾರ್ತಿಕ್ ಗೌಡ ಮೊತ್ತ ಮೊದಲು ಈ ವಿಡಿಯೊಗಳನ್ನು ತಂದು ಕೊಟ್ಟಿದ್ದೇ ಡಿಕೆ ಶಿವಕುಮಾರ್ಗೆ. ಆ ಸಂದರ್ಭದಲ್ಲಿ ಅವರ ಪಕ್ಷದ ಹಾಸನದ ಅಭ್ಯರ್ಥಿಯೂ ಇದ್ದರು. ಪ್ರಕರಣದಲ್ಲಿ ಇಷ್ಟೆಲ್ಲ ಭಾಗಿಯಾದ ಮೇಲೂ ಅವರನ್ನು ಸಂಪುಟದಲ್ಲಿ ಮುಂದುವರಿಸುವುದು ಸರಿಯಲ್ಲ. ಅವರು ಅಧಿಕಾರ ದುರ್ಬಳಕೆ ಮಾಡಿಕೊಂಡಿರುವುದು ಸ್ಪಷ್ಟ. ಸರ್ಕಾರ ಇಂತಹ ತಪ್ಪಿತಸ್ಥರಿಗೆ ರಕ್ಷಣೆ ಕೊಡಬಾರದು, ದುರಂತಕ್ಕೆ ಸಿಎಂ ಸೇರಿದಂತೆ ಇಡಿ ಸರ್ಕಾರವೇ ಅವರ ರಕ್ಷಣೆಗೆ ನಿಂತಿದೆ ಎಂದು ಎಚ್.ಡಿ. ಕುಮಾರಸ್ವಾಮಿ ದೂರಿದರು.
ರಾಜಕೀಯ ಸ್ವಾರ್ಥಕ್ಕಾಗಿ, ವಾಮಮಾರ್ಗದಲ್ಲಿ ಚುನಾವಣೆ ಗೆಲ್ಲಬೇಕೆಂಬ ಕಾರಣಕ್ಕೆ ಡಿಕೆಶಿ ಹೂಡಿರುವ ಸಂಚು ಏನು ಎಂಬುದು ಜಗಜ್ಜಾಹೀರಾಗಿದೆ. ಇಡೀ ದೇಶವೇ ಆ ವ್ಯಕ್ತಿಯ ಹೀನ ಕೆಲಸದ ಬಗ್ಗೆ ಮಾತನಾಡುತ್ತಿದೆ. ನೊಂದ ಮಹಿಳೆಯರ ಜೀವನಕ್ಕೆ ಕೊಳ್ಳಿ ಇಟ್ಟ ಈ ವ್ಯಕ್ತಿಯನ್ನು ರಕ್ಷಣೆ ಮಾಡುವ ಕೆಲಸ ಮಾಡಲಾಗುತ್ತಿದೆ. ಒಂದು ವೇಳೆ ಸರ್ಕಾರ ಈ ಕಳಂಕಿತ ಸಚಿವನನ್ನು ರಕ್ಷಣೆ ಮಾಡಿದರೆ ಭಾರೀ ದೊಡ್ಡ ಬೆಲೆ ತೆರಬೇಕಾಗುತ್ತದೆ ಎಂದು ಎಚ್.ಡಿ. ಕುಮಾರಸ್ವಾಮಿ ಎಚ್ಚರಿಸಿದರು