ಹುಬ್ಬಳ್ಳಿ:– ಜ. 27, 28ರಂದು ಹುಬ್ಬಳ್ಳಿಯಲ್ಲಿ ಗಾಳಿಪಟ ಉತ್ಸವ ನಡೆಯಲಿದೆ. ಈ ಸಂಬಂಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾಹಿತಿ ನೀಡಿದ್ದಾರೆ.
ಗಾಳಿಪಟ ಉತ್ಸವದಲ್ಲಿ 15 ದೇಶದ 23 ಕ್ರೀಡಾಪಟುಗಳು ಭಾಗಿಯಾಗಲಿದ್ದಾರೆ. ಜೊತೆಗೆ ಕುಸ್ತಿ, ಚಿತ್ರಕಲಾ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ದೇಸಿ ಕ್ರೀಡೆಗಳಿಗೆ ಆದ್ಯತೆ ನೀಡಲು ಆಯೋಜನೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ನವರು ಇಟಲಿ ತಳಿಗಳು. ಕಾಂಗ್ರೆಸ್ಸಿಗರು ಪೋಪ್, ಚರ್ಚ್ ಬಗ್ಗೆ ಮಾತಾಡಿದರೆ ಖುಷಿಯಾಗುತ್ತಿದ್ದರು. ರಾಮ, ವಿಶ್ವನಾಥ ಬಗ್ಗೆ ಮಾತಾಡಿದರೆ ಇಟಲಿ ತಳಿಗಳಿಗೆ ಎಲ್ಲಿ ತಿಳಿಯುತ್ತೆ. ಕಾಂಗ್ರೆಸ್ಸಿಗರು ಕುಡಿದು ಹೇಗೆ ಜೀವಂತ ಇರ್ತಾರೆ ಅನ್ನೋದೆ ಪವಾಡ. ಕಾಂಗ್ರೆಸ್ನವರ ಪವಾಡವೇ ನಮಗೆ ತಿಳಿಯುತ್ತಿಲ್ಲ ಎಂದಿದ್ದಾರೆ.
ಕಾಂಗ್ರೆಸ್ನವರು ಏನು ಕುಡೀತಾರೆ ಅನ್ನೋದು ಎಲ್ಲರಿಗೂ ಗೊತ್ತಿದೆ. ಇಟಲಿ ತಳಿಗಳಿಂದ ನಾವೇನೂ ನಿರೀಕ್ಷೆ ಮಾಡುವುದಕ್ಕೆ ಆಗುವುದಿಲ್ಲ. ರಾಹುಲ್ ಗಾಂಧಿ ಮುತ್ತಜ್ಜ ನಮ್ಮ ದೇಶದ ಮೊದಲ ಪ್ರಧಾನಮಂತ್ರಿ. ನಮ್ಮ ದೇಶದ ಗೌರವ, ಅಭಿಮಾನ, ಧರ್ಮ ಬಗ್ಗೆ ಯಾವ ಕಲ್ಪನೆ ಇಲ್ಲ. ದೇಶದಲ್ಲಿ ರಾಮ ಒಬ್ಬನೇ, ಗಾಂಧಿಗೂ ಅದೇ ರಾಮ, ನಮಗೂ ಅದೇ ರಾಮ ಎಂದು ಹೇಳಿದ್ದಾರೆ.