ಹಾಸನ:- ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಆಗಿಲ್ಲ, ವಿಲೀನವಾಗಿದೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ನಾವು ಬಿಜೆಪಿ ಜೊತೆ ವಿಲೀನ ಆಗುತ್ತೇವೆ ಎಂದು ಹೇಳುವ ಸಿದ್ದರಾಮಯ್ಯ ಅವರು ಏನು ಮಾಡುತ್ತಿದ್ದಾರೆ? ಕಾಂಗ್ರೆಸ್ನಲ್ಲಿರುವ ಮಾಜಿ ಮುಖ್ಯಮಂತ್ರಿ ಸೇರಿ ಎಲ್ಲರನ್ನು ಬಿಜೆಪಿಗೆ ಕಳುಹಿಸುತ್ತಿದ್ದಾರೆ ಎಂದರು.
ನಾವು ವಿಲೀನ ಆಗುತ್ತೇವೆ ಅಂತಾ ಹೇಳುತ್ತಿದ್ದೀರಲ್ಲ, ನೀವು ಏನ್ ಮಾಡುತ್ತಿದ್ದೀರಿ? ಕಾಂಗ್ರೆಸ್ನಲ್ಲಿದ್ದವರನ್ನು ಟೆಂಟ್, ಗಳಗಳ ಸಮೇತ ಕಿತ್ತು ಕಳಿಸುತ್ತಿದ್ದೀರಿ. ಕಾಂಗ್ರೆಸ್ನಲ್ಲಿದ್ದ ಮಾಜಿ ಸಿಎಂ ಸೇರಿ ಎಲ್ಲರನ್ನೂ ಬಿಜೆಪಿಗೆ ಕಳಿಸುತ್ತಿದ್ದೀರಿ ಎಂದರು.
ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳಲು ದೇವೇಗೌಡರೇ ಹೇಳಿ ಕಳುಹಿಸಿದ್ದಾರೆ ಅಂತ ನೀವು ಹೇಳುತ್ತಿದ್ದೀರಿ. ಏತಕ್ಕೆ ಹೋಗಲು ದೇವೇಗೌಡರು ಹೇಳಿದರು? ಅವರ 60 ವರ್ಷ ರಾಜಕೀಯ ಜೀವನದಲ್ಲಿ ಕಾಂಗ್ರೆಸ್ ನಂಬಿ, ಕಾಂಗ್ರೆಸ್ ಸಂಕಷ್ಟದಲ್ಲಿದ್ದಾಗ ಧ್ವನಿಗೂಡಿಸಿ ಕೆಲಸ ಮಾಡಿದ್ದರು. 2018 ರಲ್ಲಿ ನಿಮ್ಮ ಜೊತೆ ಸಂಬಂಧ ಬೆಳೆಸಿದ್ದೆವಲ್ಲ? ನೀವು ಕೊಟ್ಟ ಕೊಡುಗೆ ಏನು? ಎಂದು ಪ್ರಶ್ನಿಸಿದರು.
ಪ್ರಧಾಮಂತ್ರಿ ರಾಜೀನಾಮೆ ಕೊಟ್ಟು ಬಾ ಮುಂದಿನ ಮೂರು ವರ್ಷ ಮುಖ್ಯಮಂತ್ರಿ ಆಗು ಎಂದಿದ್ದರು. ನಿಮ್ಮನ್ನು ನಂಬಿದ್ದಕ್ಕೆ ನಮ್ಮ ಕುತ್ತಿಗೆ ಕುಯ್ದಿರಲ್ಲಾ, ಚಾಕು ಹಾಕಿಸಿಕೊಳ್ಳಲು ನಿಮ್ಮ ಜೊತೆ ಇರಬೇಕಾ? ಈ ಚುನಾವಣೆ ಆಗಲಿ ಆಮೇಲೆ ಉತ್ತರ ಕೊಡೋಣ ಎಂದರು.
ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದೇವೆ. ಜನಗಳ ಅಭಿಪ್ರಾಯ ಏನಿದೆ, ಜನ ಏನು ಬಯಸುತ್ತಾರೆ ಅದನ್ನು ಮಾಡುತ್ತೇವೆ. ಜನಾಭಿಪ್ರಾಯಕ್ಕೆ ಏನು ತೀರ್ಮಾನ ಮಾಡಬೇಕು ಮಾಡುತ್ತೇವೆ ಎಂದು ಕುಮಾರಸ್ವಾಮಿ ಹೇಳಿದರು. ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡ ವಿರೋಧ ವಿಚಾರವಾಗಿ ಮಾತನಾಡಿದ ಅವರು, ಪ್ರೀತಂಗೌಡ ಅವರು ತಮ್ಮ ಭಾವನೆ ಹೇಳಿಕೊಂಡಿದ್ದಾರೆ ಎಂದರು.