ಹಾಸನ:- ಜೆಡಿಎಸ್ ಪಕ್ಷ ದೇವೇಗೌಡರ ಕುಟುಂಬದ ಆಸ್ತಿ ಅಲ್ಲ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹೇಳಿದ್ದಾರೆ..
ಈ ಸಂಬಂಧ ಮಾತನಾಡಿದ ಅವರು,ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ 14 ತಿಂಗಳ ಕಾಲ ಸಿಎಂ ಆಗಿದ್ದರು. ಯಾರಿಂದಲಾದರೂ ವರ್ಗಾವಣೆಗೆ ಹಣ ಪಡೆದಿದ್ದರೆ ಹೇಳಲಿ. ನಾನು ಕ್ಷಮೆ ಕೇಳುತ್ತೇನೆ ಎಂದರು.
13 ತಿಂಗಳಿಗೆ ಕುಮಾರಣ್ಣನನ್ನು ಸಿಎಂ ಸ್ಥಾನದಿಂದ ಯಾಕೆ ತೆಗೆದರು. 25 ಸಾವಿರ ಕೋಟಿ ರೂ. ರೈತರ ಸಾಲಮನ್ನಾ ಮಾಡಿದರು. ಕಾಂಗ್ರೆಸ್ಗೆ ನನ್ನ ಒಂದು ಸಣ್ಣ ತಪ್ಪು ಕಂಡು ಹಿಡಿಯಲು ಆಗಲಿಲ್ಲ ಎಂದು ಕಿಡಿಕಾರಿದ್ದಾರೆ.
ಪ್ರಧಾನಿ ಸ್ಥಾನದಿಂದ ನನ್ನನ್ನು ಯಾಕೆ ತೆಗೆದರು. ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ನನ್ನನ್ನು ಸೋಲಿಸಿದರು. ನನ್ನನ್ನು ಏಕೆ ಸೋಲಿಸಿದರು ಎಂದು ಹೇಳಲು ಯೋಗ್ಯತೆ ಇದೆಯಾ ಎಂದು ಪ್ರಶ್ನಿಸಿದ್ದಾರೆ. ಜೆಡಿಎಸ್ ಪಕ್ಷ ಹೆಚ್.ಡಿ.ದೇವೇಗೌಡರ ಆಸ್ತಿನಾ ಎಂದು ಹೇಳುತ್ತಾರೆ. ಜೆಡಿಎಸ್ ಪಕ್ಷ ದೇವೇಗೌಡರ ಕುಟುಂಬದ ಆಸ್ತಿ ಅಲ್ಲ. ಮುಸ್ಲಿಮರಿಗೆ ಮೀಸಲಾತಿ ಕೊಟ್ಟಿದ್ದೇನೆ ಎಂದರು.
ಏನಾಗಿದೆ ಈ ರಾಜ್ಯ ಇವತ್ತು. ಯಾವ ಸಿದ್ದರಾಮಯ್ಯ ಅವರ ಬಗ್ಗೆ ಎತ್ತರದಲ್ಲಿ ಯೋಚನೆ ಮಾಡಿದ್ದೆ. ಇವತ್ತು ಸಿದ್ದರಾಮಯ್ಯ ಕಾಲದಲ್ಲಿ ಯಾವ ಪರಿಸ್ಥಿತಿ ಇದೆ. ಇವತ್ತು ರಾಜ್ಯ ಕೆಟ್ಟ ಸ್ಥಿತಿಗೆ ತಲುಪಿದೆ. ನಾನು ಅವರ ಬಗ್ಗೆ ಲಘುವಾಗಿ ಮಾತನಾಡಲ್ಲ. ಜನತಾದರ್ಶನದಲ್ಲಿ ಉಪಮುಖ್ಯಮಂತ್ರಿ ಮುಂದೆ ಮಹಿಳೆಯೊಬ್ಬರು ಅಧಿಕಾರ ವಿರುದ್ಧ ದೂರು ಹೇಳುತ್ತಾರೆ. ಕೂಡಲೇ ಅವರನ್ನು ಸಸ್ಪೆಂಡ್ ಮಾಡಿ ಅಂತಾರೆ. ಈ ದೇಶದಲ್ಲಿ ಕಾಂಗ್ರೆಸ್ ಈ ಸ್ಥಿತಿಗೆ ಬರಬೇಕಾದರೆ ಕಾರಣ ಇವರೇ. ಕುಮಾರಸ್ವಾಮಿ ಸರ್ಕಾರ ಏಕೆ ತೆಗೆದರು. ಹದಿನೆಂಟು ಜನರನ್ನು ಬಾಂಬೆಗೆ ಯಾರು ಕಳುಹಿಸಿದವರು ಹೇಳಲಿ ಎಂದು ವಾಗ್ದಾಳಿ ಮಾಡಿದ್ದಾರೆ.