ಕೋಲಾರ:- ಹಾಸನ ಪೆನ್ ಡ್ರೈವ್ ಬಿಡುಗಡೆ ಹಿಂದೆ ಡಿ.ಕೆ.ಶಿವಕುಮಾರ್ ಕೈವಾಡ ವಿಚಾರಕ್ಕೆ ಸಂಬಂಧಿಸಿದಂತೆ ಕೋಲಾರದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಬೃಹತ್ ಪ್ರತಿಭಟನೆ ನಡೆಸಿದೆ.
Lokasabha Election: ಗದಗದಲ್ಲಿ ಎಚ್ ಕೆ ಪಾಟೀಲ್ ಕುಟುಂಬದಿಂದ ಮತದಾನ…!
ಪ್ರತಿಭಟನೆಯಲ್ಲಿ ರಾಜ್ಯ ಸರ್ಕಾರದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದ್ದಾರೆ. ನಗರದ ಹೊಸ ಬಸ್ ನಿಲ್ದಾಣ ಸರ್ಕಲ್ ನಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆದಿದೆ.
ತಪ್ಪು ಮಾಡಿದ್ರೆ ಪ್ರಜ್ವಲ್ ರೇವಣ್ಣ ಮೇಲೆ ನಿರ್ಧಾಕ್ಷಿಣ ಕ್ರಮವಾಗಲಿ. ಪೆನ್ ಡ್ರೈ ಬಿಡುಗಡೆ ಮಾಡಿ, ಮಹಿಳೆಯರ ಮಾನಹಾನಿ ಮಾಡಿದವರ ಮೇಲೆ ಕಾನೂನು ಕ್ರಮ ಜರುಗಿಸಬೇಕು, ಎಸ್.ಐಟಿ ಯಿಂದ ಪೆನ್ ಡ್ರೈವ್ ಬಿಡುಗಡೆ ಮಾಡಿದವರ ರಕ್ಷಣೆಯಾಗಲಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ. ಹಾಸನ ಪೆನ್ ಡ್ರೈವ್ ಪ್ರಕರಣವನ್ನ ಸಿಬಿಐ ಗೆ ವಹಿಸಬೇಕು ಆಗ್ರಹಿಸಿದರು. ಸಿಎಂಆರ್ ಶ್ರೀನಾಥ್, ಎಂಎಲ್ಸಿ ಗೋವಿಂದರಾಜು ನೇತೃತ್ವದಲ್ಲಿ ಪ್ರತಿಭಟನೆ ಜರುಗಿದೆ. ನೂರಾರು ಜೆಡಿಎಸ್ ನಾಯಕರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದರು.