ಧಾರವಾಡ: ಲೋಕಸಭಾ ಚುನಾವಣೆಯಲ್ಲಿ ಪ್ರಹ್ಲಾದ್ ಜೋಶಿ ಅವರ ಗೆಲುವಿಗೆ ಹಗಲಿರುಳು ಶ್ರಮಿಸಿದ ಬಿಜೆಪಿ ಕಾರ್ಯಕರ್ತರು ಹಾಗೂ ಜೋಶಿ ಅವರ ಗೆಲುವಿಗೆ.ಕಾರಣೀಕರ್ತರಾದ ಮತದಾರರಿಗಾಗಿ ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಎದುರಿಗೆ ಇರುವ ಸಿ.ಎಸ್.ಪಾಟೀಲ ಕಲ್ಯಾಣಮಂಟಪದಲ್ಲಿ ಕೃತಜ್ಞತಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.
ಪಾಟೀಲ ಕಲ್ಯಾಣಮಂಟಪದಲ್ಲಿ ಕೃತಜ್ಞತಾ ಸಮಾರಂಭದ ಜೊತೆಗೆ ಬಿಜೆಪಿ ಪಕ್ಷದ ಸದಸ್ಯತ್ವ ಮಹಾಸಂಪರ್ಕ ಅಭಿಯಾನಕ್ಕೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಚಾಲನೆ ನೀಡಿದರು.
ಮಾಡ ಹಾಗಲಕಾಯಿ ಬಗ್ಗೆ ಗೊತ್ತಾ.? ಇದರ ಅದ್ಭುತ ಆರೋಗ್ಯ ಪ್ರಯೋಜನ ಕೇಳಿದ್ರೆ ಶಾಕ್ ಆಗ್ತೀರಾ..?
ಕೃತಜ್ಞತಾ ಹಾಗೂ ಸದಸ್ಯತ್ವ ಅಭಿಯಾನ ಸಮಾರಂಭದಲ್ಲಿ ಸಾವಿರಾರು ಜನ ಕಾರ್ಯಕರ್ತರು ಪಾಲ್ಗೊಂಡಿದ್ದರು. ಲೋಕಸಭಾ ಚುನಾವಣೆಯಲ್ಲಿ ತಮ್ಮ ಗೆಲುವಿಗೆ ಕಾರಣೀಕರ್ತರಾದ ಪಕ್ಷದ ಕಾರ್ಯಕರ್ತರು ಮತ್ತು ಮತದಾರರಿಗೆ ಪ್ರಹ್ಲಾದ್ ಜೋಶಿ ಅವರು ಕೃತಜ್ಞತೆ ಸಲ್ಲಿಸಿದರು.
ಈ ಕಾರ್ಯಕ್ರಮದಲ್ಲಿ ಮಾಜಿ ಶಾಸಕರಾದ ಅಮೃತ ದೇಸಾಯಿ, ಸೀಮಾ ಮಸೂತಿ, ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ, ಧಾರವಾಡ ಕೆಎಂಎಫ್ ಅಧ್ಯಕ್ಷ ಶಂಕರ ಮುಗದ, ಮಾಜಿ ಮೇಯರ್ ಈರೇಶ ಅಂಚಟಗೇರಿ, ಸಂಗನಗೌಡ ರಾಮನಗೌಡರ ಸೇರಿದಂತೆ ಅನೇಕ ಬಿಜೆಪಿ ಮುಖಂಡರು ಪಾಲ್ಗೊಂಡಿದ್ದರು.
ವರದಿ. ಮಾರುತಿ ಲಮಾಣಿ