ಮೈಸೂರು ರಾಜ್ಯವು ಕರ್ನಾಟಕ ಎಂದು ನಾಮಕರಣವಾಗಿ ಒಂದನೇ ನವೆಂಬರ್ 2023 ಕ್ಕೆ 50 ವರ್ಷ ಪೂರ್ಣಗೊಂಡಿದೆ. ಈ ಶುಭ ಸಂದರ್ಭದಲ್ಲಿ ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಎಂಬ ಹೆಸರಿನಲ್ಲಿ ಇಡೀ ವರ್ಷ ಕರ್ನಾಟಕ ಇತಿಹಾಸ ಕಲೆ. ಸಾಹಿತ್ಯ. ಸಂಸ್ಕೃತಿ ಹಾಗೂ ನಾಡು ನುಡಿಗಾಗಿ ಸಂಬಂಧಿಸಿದಂತೆ ಮತ್ತು ಯುವ ಜನತೆಯಲ್ಲಿ ಕನ್ನಡ ಕನ್ನಡಿಗ ಕರ್ನಾಟಕದ ಅರಿವು ಮೂಡಿಸುವ ಯೋಜನೆಗಳನ್ನು ಹಮ್ಮಿಕೊಂಡಿದೆ.
![Demo](https://ainlivenews.com/wp-content/uploads/2023/12/spoorthi-1.jpg)
ಈ ಹಿನ್ನೆಲೆಯಲ್ಲಿ ಕರ್ನಾಟಕ ಸಂಭ್ರಮ 50ರ ಹೆಸರಾಯಿತು ಕನ್ನಡ ಉಸಿರಾಗಲಿ ಕನ್ನಡ ಅಭಿಯಾನದ ನಿಮಿತ್ಯವಾಗಿ 2023 ನವಂಬರ್ ಒಂದರಿಂದ 2024 ನವಂಬರ ವರೆಗೆ ರಾಜ್ಯದಾದ್ಯಂತ ವರ್ಷಪೂರ್ತಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದರು.
ಇಂದು ದಿ. 27. 02.2024 ರಂದು ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನಲ್ಲಿ ಕರ್ನಾಟಕ ಸಂಭ್ರಮ 50ರ ಜ್ಯೋತಿ ರಥಯಾತ್ರೆ ಅದ್ದೂರಿಯಾಗಿ ಸಂಚರಿಸುತ್ತಿತ್ತು. ನಗರದಲ್ಲಿ ಇಂದು ವಿವಿಧ ಶಾಲೆಯ ವಿದ್ಯಾರ್ಥಿ ವಿದ್ಯಾರ್ಥಿಗಳು ಊರಿನ ಹಿರಿಯರು ಮುಖಂಡರು ಸೇರಿ ಅದ್ದೂರಿಯಾಗಿ ಕನ್ನಡದ ರಥವನ್ನು ಬರಮಾಡಿಕೊಂಡು.
ಇದೇ ಸಂದರ್ಭದಲ್ಲಿ ತಹಶೀಲ್ದಾರ ಗಿರೀಶ ಸ್ವಾದಿ. ಪೌರಾಯುಕ್ತರು ಜಗದೀಶ ಈಟಿ. ಎಸ ಎಲ್ಲ ಕಾಗಿನವರ. ಮುತ್ತು ಚೌಡಕೇರ ಬಾಗೇವಾಡಿ. ಮ ಕೈ ಮೇಗಾಡಿ. ಸದಾಶಿವ ಕುಂಬಾರ ಶ್ರೀಮತಿ ಗೌರಿ ಮಿಳ್ಳಿ. ಕೀರಣ. ಚಿದಾನಂದ ಸೊಲ್ಲಾಪುರ ಸೇರಿದಂತೆ ಮುಂತಾದವರು ಪಾಲ್ಗೊಂಡಿದ್ದರು.
ಪ್ರಕಾಶ ಕುಂಬಾರ
ಬಾಗಲಕೋಟೆ
![](https://ainlivenews.com/wp-content/uploads/2024/01/Ad-Banner-copy-scaled.jpg)