ಚಾಮರಾಜನಗರ:- ಕಡವೆ ಚರ್ಮ ಸಾಗಾಟ ಮಾಡುತ್ತಿದ್ದ ವೇಳೆ ಖಚಿತ ಮಾಹಿತಿ ಆಧರಿಸಿ ಅರಣ್ಯಾಧಿಕಾರಿಗಳು ಇಬ್ಬರನ್ನು ಬಂಧಿಸಿದ ಘಟನೆ ಬಿಳಿಗಿರಿರಂಗನಾಥ ದೇವಾಲಯ ಹುಲಿ ಸಂರಕ್ಷಿತ ಪ್ರದೇಶದ ಯಳಂದೂರು ವನ್ಯಜೀವಿ ವಲಯದ ಕೂಳಿಗುಂಡಿ ಅರಣ್ಯ ಪ್ರದೇಶದಲ್ಲಿ ಜರುಗಿದೆ.
ಚಾಮರಾಜನಗರ: ಇಂದು ಇಂಡಿಗನತ್ತ ಗ್ರಾಮದಲ್ಲಿ ಮರು ಮತದಾನ..!
ಬಿ.ಆರ್.ಹಿಲ್ಸ್ ನ ಯರಕನಗದ್ದೆ ಗ್ರಾಮದ ಬಸವಣ್ಣ, ಬಂಗ್ಲಪೋಡಿನ ಕೇತೇಗೌಡ ಬಂಧಿತ ಆರೋಪಿಗಳು ಎನ್ನಲಾಗಿದೆ. ಬಂಗ್ಲೆಪೋಡಿನ ಬಂಗೀ ಜಡೇಗೌಡ, ಕೇತೇಗೌಡ ಪರಾರಿಯಾಗಿದ್ದಾರೆ.
ಕಡವೆ ಚರ್ಮ ಸಾಗಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಯಳಂದೂರು ಆರ್ಎಫ್ಒ ನಾಗೇಂದ್ರನಾಯಕ ನೇತೃತ್ವದಲ್ಲಿ ದಾಳಿ ನಡೆದಿದೆ. ಈ ವೇಳೆ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರಿಂದ ಕಡವೆ ಚರ್ಮ ವಶಪಡಿಸಿಕೊಳ್ಳಲಾಗಿದೆ.
ಪರಾರಿಯಾದ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದು, ಇಬ್ಬರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
![](https://ainlivenews.com/wp-content/uploads/2024/01/Ad-Banner-copy-scaled.jpg)