ತುಮಕೂರು;-ಜೆಡಿಎಸ್ ವರಿಷ್ಠರಿಗೆ ಪಕ್ಷ ತೊರೆಯುವವರ ಬಿಗ್ ಶಾಕ್ ಎದುರಾಗಿದೆ. ತುಮಕೂರು ಜಿಲ್ಲೆಯಲ್ಲಿ ಬೃಹತ್ ಸಂಖ್ಯೆಯ ಮುಖಂಡರು ಕೈ ನತ್ತ ಮುಖ ಮಾಡಿದ್ದಾರೆ.
ಈ ಬಗ್ಗೆ ಶಾಸಕ ಸ್ಪೋಟಕ ಹೇಳಿಕೆ ನೀಡಿದ್ದಾರೆ. ದೊಡ್ಡ ಮಟ್ಟದ ನಾಯಕರಿಂದ ತಳ ಮಟ್ಟದ ನಾಯಕರೂ ಸದಸ್ಯದಲ್ಲೇ ಕಾಂಗ್ರೆಸ್ ಗೆ ಬರಲಿದ್ದಾರೆ ಎಂದರು.

ಮುಂದಿನ ದಿನಗಳಲ್ಲಿ ಜಿಲ್ಲೆಯಿಂದ ಯಾರೆಲ್ಲಾ ಕಾಂಗ್ರೆಸ್ಗೆ ಬರಲಿದ್ದಾರೆ ಅನ್ನೋದು ನಿಮಗೆ ಗೊತ್ತಾಗುತ್ತೆ. ನಾನು ಆ ಬಗ್ಗೆ ಈಗ ಹೇಳಲ್ಲ ಎನ್ನುವ ಮೂಲಕ ನಮ್ಮ ಸಂಪರ್ಕದಲ್ಲಿರುವ ಜೆಡಿಎಸ್ ಪಕ್ಷ ತೊರೆಯುವ ಹೆಸರು ಬಿಟ್ಟ ಕೊಡದೆ ರಹಸ್ಯವಾಗಿಟ್ಟ ಶಾಸಕ ಶ್ರೀನಿವಾಸ್.
ಡಿಸಿಎಂ ವಿಚಾರದ ಬಗ್ಗೆ ಸಚಿವ ಕೆ.ಎನ್. ರಾಜಣ್ಣರವರು ಕೇಳಿರುವುದು ಅವರ ವೈಯಕ್ತಿಕ ಅಭಿಪ್ರಾಯವಾಗಿದೆ. ಅದೆಲ್ಲವನ್ನು ಹೈಕಮಾಂಡ್ ನಿರ್ಧಾರ ಮಾಡುತ್ತದೆ. ನಾನು ಈ ವಿಚಾರದ ಬಗ್ಗೆ ಮಾತನಾಡುವುದಿಲ್ಲ. ಡಿ ಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನಡುವೆ ಯಾವುದೇ ರೀತಿಯ ಗೊಂದಲ ಇಲ್ಲ, ಭಿನ್ನಾಭಿಪ್ರಾಯವೂ ಇಲ್ಲ. ಮಾಧ್ಯಮದವರೇ ಏನೇನೋ ಸೃಷ್ಟಿ ಮಾಡಿರಬೇಕು ಬಿಟ್ಟರೆ ಬೇರೇನೂ ಇಲ್ಲ. ನಮ್ಮ ಪಕ್ಷ ಉತ್ತಮ ಆಡಳಿತ, ಅಭಿವೃದ್ಧಿ ಪರವಾಗಿ ಯೋಚನೆ ಮಾಡುತ್ತಿದೆ ಬಿಟ್ಟರೆ ಬೇರೆ ಯಾವುದೂ ಇಲ್ಲ ಎಂದು ಸ್ಪಷ್ಟಪಡಿಸಿದರು.
