ಕಡೂರು :-ವಿದ್ಯುತ್ ತಂತಿ ತುಂಡಾಗಿ ಮನೆ ಮೇಲೆ ಬಿದ್ದು ಮನೆ ಹೊತ್ತಿ ಉರಿದ ಘಟನೆ ಕಡೂರು ತಾಲೂಕಿನ ಬ್ಯಾಡರಹಳ್ಳಿ ಗ್ರಾಮದಲ್ಲಿ ಜರುಗಿದೆ.
ಮನೆಯಲ್ಲಿದ್ದ ಗೃಹಪಯೋಗಿ ವಸ್ತುಗಳು ಬೆಂಕಿ ಗಾಹುತಿಯಾಗಿದೆ. ಮಂಜಮ್ಮ ಚಂದ್ರಪ್ಪ ಎಂಬವರ ಮನೆ ಬೆಂಕಿಯಿಂದ ಸಂಪೂರ್ಣ ಹಾನಿಯಾಗಿದ್ದು ಅದೃಷ್ಟ ವಶಾತ್ ಯಾವುದೇ ರೀತಿ ಪ್ರಾಣಹಾನಿ ಸಂಭವಿಸಿಲ್ಲ, ಮನೆಯವರು ತೋಟಕ್ಕೆ ಹೋಗಿದ್ದಾಗ ದುರ್ಘಟನೆ ನಡೆದಿದ್ದು ಸ್ಥಳೀಯರು ಹಾಗೂ ಅಗ್ನಿಶಾಮಕ ತಂಡ ಬೆಂಕಿ ನಂದಿಸಿದ್ದಾರೆ.
ಈ ಕುರಿತು ಕಡೂರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ