ಬಳ್ಳಾರಿ:- ಕಾಂಗ್ರೆಸ್ ಸರ್ಕಾರ ವಿರುದ್ಧ ಬಿಜೆಪಿ ಕಾರ್ಯಕರ್ತರು ಬಳ್ಳಾರಿ ಡಿಸಿ ಕಛೇರಿ ಮುಂದೆ ಪ್ರೊಟೆಸ್ಟ್ ನಡೆಸಿದ್ದಾರೆ.
ಬಿಜೆಪಿ ರೈತ ಮೋರ್ಚಾ ಘಟಕದಿಂದ ಕಾಂಗ್ರೆಸ್ ಸರ್ಕಾರ ರೈತ ವಿರೋಧಿ ನೀತಿ ಅಂತಾ ಪ್ರತಿಭಟನೆ ಮಾಡಿದ್ದಾರೆ. ರಾಜ್ಯ ಸರ್ಕಾರ ಕೃಷಿ ಸನ್ಮಾನ ಯೋಜನೆ ನಿಲ್ಲಿಸಿದೆ, ಜನ ಪರ ಆಡಳಿತ ನೀಡಲು ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಬಿಜೆಪಿ ರೈತ ಮೋರ್ಚಾ ಕಾರ್ಯಕರ್ತರ ಆಕ್ರೋಶ ಹೊರ ಹಾಕಿದ್ದಾರೆ.
ನೂರಾರು ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ ಜರುಗಿದೆ.