ಧಾರವಾಡ: ಕೇಂದ್ರ ಸರ್ಕಾರದ ಸಂಸದರ ಅಮಾನತು ನಡೆ ಖಂಡಿಸಿ ಕೇಂದ್ರ ಬಿಜೆಪಿ ವಿರುದ್ಧ ಕಪ್ಪು ಬಾವುಟ ಹಿಡಿದು ಧಾರವಾಡದಲ್ಲಿ ಕೈ ನಾಯಕರ ಪ್ರತಿಭಟನೆ ನಡೆಸಿದರು. ಎಐಸಿಸಿ ಹಾಗೂ ಕೆಪಿಸಿಸಿ ಅಧ್ಯಕ್ಷರುಗಳ ಆದೇಶ ಮೇರೆಗೆ ಪ್ರತಿಭಟನೆ ಮೆರವಣಿಗೆಯಾಗಿದ್ದು, ನಗರದ ಡಾ.ಬಾಬಾ ಸಹೇಬ್ ಅಂಬೇಡ್ಕರ್ ಮೂರ್ತಿಯಿಂದ ಜಿಲ್ಲಾ ಕಚೇರಿಯವರೆಗೆ ಪ್ರತಿಭಟನೆ ಮೆರವಣಿಗೆ ನಡೆಸಿದರು.
ಹು-ಧಾ ಮಾಹಾನಗರ ಕಾಂಗ್ರೆಸ್ ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ಮೆರವಣಿಗೆ ಉದ್ದಕ್ಕೂ ಕೇಂದ್ರ ಬಿಜೆಪಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ಕೂಡಲೇ ಕೆಂದ್ರ ಬಿಜೆಪಿ ಸರ್ಕಾರ ಸಂಸದರ ಅಮಾನತು ಹಿಂಪಡೆಯಬೇಕು. ಇಲ್ಲವಾದಲ್ಲಿ ಮತ್ತಷ್ಟು ಉಗ್ರ ಹೋರಾಟ ಹಮ್ಮಿಕೊಳ್ಳುವುದಾಗಿ ಎಚ್ಚರಿಕೆ ನೀಡಿದರು.