ಬೆಂಗಳೂರು: ಕರಿಮಣಿ ಸೀರಿಯಲ್ ನಿರ್ದೇಶಕ ವಿನೋದ್ ದೋಂಡಾಲೆ ಅವರು ಆತ್ಮಹತ್ಯೆಗೆ ಶರಣಾಗಿದ್ದು ನಾಗರಭಾವಿಯ ತಮ್ಮ ನಿವಾಸದಲ್ಲೇ ನೇಣಿಗೆ ಶರಣಾಗಿದ್ದಾರೆ.
ಪಿ ಶೇಷಾದ್ರಿ ಹಾಗೂ ಟಿ ಎನ್ ಸೀತಾರಾಮ್ ಗರಡಿಯಲ್ಲಿ ಪಳಗಿದ್ದ ನಿರ್ದೇಶಕ ಕಿರುತೆರೆ ಹಾಗೂ ಹಿರಿತೆರೆ ಎರಡರಲ್ಲೂ ಬ್ಯುಸಿ ಆಗಿದ್ದ ನಿರ್ದೇಶಕ ವಿನೋದ್ ನೀನಾಸಂ ಸತೀಶ್ ನಟನೆಯ ಅಶೋಕ ಬ್ಲೇಡ್ ಚಿತ್ರದ ನಿರ್ದೇಶಕರಾಗಿದ್ದು ಈ ಸಿನಿಮಾದ ಕೊನೆಯ ಹಂತದ ಚಿತ್ರೀಕರಣ ಬಾಕಿಯಿದೆ
Renukaswamy Case: ನಟ ದರ್ಶನ್ ಗ್ಯಾಂಗ್ನ 4ನೇ ಆರೋಪಿ ರಾಘವೇಂದ್ರನ ತಾಯಿ ನಿಧನ
ನಿನ್ನೆಯಷ್ಟೇ ನಟ ನೀನಾಸಂ ಸತೀಶ್ ಸತೀಶ್ ಹಾಗೂ ನಿರ್ಮಾಪಕರ ಜೊತೆ ಶೂಟಿಂಗ್ ಬಗ್ಗೆ ಚರ್ಚಿಸಿದ್ದ ವಿನೋದ್ ಇಂದು ನೇಣಿಗೆ ಶರಣಾಗಿದ್ದು ಪತ್ನಿ ಹಾಗೂ ಮೂವರು ಮಕ್ಕಳನ್ನ ಅಗಲಿದ ಸ್ಯಾಂಡಲ್ ವುಡ್ ಡೈರೆಕ್ಟರ್ ಸದ್ಯ ಪೋಸ್ಟ್ ಮಾರ್ಟಂಗಾಗಿ ಪಾರ್ಥಿವ ಶರೀರವನ್ನ ವಿಕ್ಟೋರಿಯಾಗೆ ಶಿಫ್ಟ್ ಮಾಡಲಾಗಿದೆ.