ವಿಮಾನದಲ್ಲಿ ನೀರು ಕುಡಿದು ಅಸ್ವಸ್ಥ ಹಿನ್ನೆಲೆ, ಮಯಾಂಕ್ ಅಗರ್ವಾಲ್ ರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ
ಕರ್ನಾಟಕ ರಣಜಿ ತಂಡದೊಂದಿಗೆ ತ್ರಿಪುರಾದ ಅಗರ್ತಲಾದಿಂದ ಸೂರತ್ಗೆ ವಿಮಾನದಲ್ಲಿ ಅಗರ್ವಾಲ್ ಪ್ರಯಾಣ ಬೆಳೆಸಿದ್ದರು. ವಿಮಾನದಲ್ಲಿ ಕುಳಿತಿದ್ದ ಮಯಾಂಕ್, ಸೀಟಿನ ಮುಂಭಾಗದಲ್ಲಿ ಇಟ್ಟಿದ್ದ ನೀರನ್ನು ಕುಡಿದು ಅಸ್ವಸ್ಥಗೊಂಡಿದ್ದಾರೆ.
ನೀರು ಕುಡಿಯುತ್ತಿದ್ದಂತೆ ಮಯಾಂಕ್ ನಾಲಿಗೆ, ಬಾಯಿಗೆ ಸುಟ್ಟ ಅನುಭವವಾಗಿದೆ. ಪರಿಣಾಮ ಅವರು ಅಸ್ವಸ್ಥಗೊಂಡಿದ್ದಾರೆ. ತಕ್ಷಣ ಅವರನ್ನು ಅಗರ್ತಲಾದ ಐಎಲ್ಎಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಯಿತು.
ತ್ರಿಪುರ ವಿರುದ್ಧ ಸೋಮವಾರ ನಡೆದ ರಣಜಿ ಪಂದ್ಯದಲ್ಲಿ ಕರ್ನಾಟಕ ಗೆಲುವು ಸಾಧಿಸಿತ್ತು. ಮುಂದಿನ ಪಂದ್ಯಕ್ಕಾಗಿ ಸೂರತ್ಗೆ ಪ್ರಯಾಣ ಬೆಳೆಸಲಾಗಿತ್ತು.