ಪವಾಡ ಪುರುಷನ ನೆಲೆ ಹಾಗೂ ಪ್ರಸಿದ್ಧ ಯಾತ್ರಾ ಸ್ಥಳ ಮಲೆ ಮಹದೇಶ್ವರಸ್ವಾಮಿ ದೇವಾಲಯದಲ್ಲಿ ಕಡೆ ಕಾರ್ತಿಕ ಸೋಮವಾರದ ಅಂಗವಾಗಿ ಮಲೆ ಮಹದೇಶ್ವರ ಸ್ವಾಮಿಗೆ ವಿಶೇಷ ಪೂಜೆ ಪುನಸ್ಕಾರಗಳು ವಿಜೃಂಭಣೆಯಿಂದ ನಡೆದವು. ಮಾದಪ್ಪನ ಬೆಟ್ಟದಲ್ಲಿ ಮಾದಪ್ಪನ ದೇವಾಲಯದಲ್ಲಿ ಕಡೆಯ ಕಾರ್ತಿಕ ಮಾಸದಪ್ರಯಕ್ತ ಬಗೆಬಗೆಯ ಹೂವುಗಳಿಂದ ಅಲಂಕರಿಸಲಾಗಿತ್ತು. ರಾತ್ರಿ ಬೆಟ್ಟದ ದೀಪದಗಿರಿ ಒಡ್ಡುವಿನಲ್ಲಿ ಪವಾಡಪುರುಷ ಮಹದೇಶ್ವರ ಸ್ವಾಮಿಯ ಮಹಾ ಜ್ಯೋತಿಯನ್ನು ಬೆಳಗಲಾಯಿತು.
ಸಾಲೂರು ಮಠದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ನೇತೃತ್ವದಲ್ಲಿ ಬೇಡಗಂಪಣ ಸಮುದಾಯದ ಅರ್ಚಕರು, ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಹಾಗೂ ನೂರಾರು ಭಕ್ತರ ಸಮ್ಮುಖದಲ್ಲಿ ಮಹಾ ಜ್ಯೋತಿ ಬೆಳಗಿದರು. ಈ ಸಂದರ್ಭದಲ್ಲಿ ಭಕ್ತರು ‘ಉಫೇ ಮಾದಪ್ಪ, ಮಾಯ್ಕಾರ ಮಾದಪ್ಪ…’ ಮುಂತಾದ ಘೋಷಣೆಗಳನ್ನು ಕೂಗಿದರು.
Samantha: ಜೀನ್ಸ್’ನಲ್ಲಿ ನೆವರ್ ಬಿಪೋರ್ ಎಂಬಂತೆ ಬೋಲ್ಡ್ ಲುಕ್ಸ್ ಕೊಟ್ಟ ಸಮಂತಾ..! ಫೋಟೋಸ್ ನೋಡಿ
ಪ್ರತಿ ವರ್ಷ ಕಾರ್ತಿಕ ಮಾಸದ ಕೊನೆಯ ಸೋಮವಾರದ ರಾತ್ರಿ ಈ ಸೇವೆಯನ್ನು ನೆರವೇರಿಸಲಾಗುತ್ತದೆ. ಜ್ಯೋತಿ ಬೆಳಗುವುದಕ್ಕೂ ಮುನ್ನ, ದೇವಾಲಯದ ಒಳ ಆವರಣದಲ್ಲಿ ಮಹದೇಶ್ವರ ಸ್ವಾಮಿಯ ಉತ್ಸವ ಪೂಜೆ ನೆರವೇರಿಸಿ ಮೂರ್ತಿಗೆ ವಿಶೇಷ ಒಳ ಆವರಣದಲ್ಲಿ ಉತ್ಸಮೂರ್ತಿಯನ್ನು ದೇವಾಲಯಕ್ಕೆ ಮೂರು ಬಾರಿ ಪ್ರದಕ್ಷಿಣೆ ಮಾಡಿಸಲಾಯಿತು.