ಕೆ.ಆರ್.ಪುರ: ಧಾರ್ಮಿಕ, ಪರಂಪರೆ, ಸಂಸ್ಕೃತಿ ಮತ್ತು ಜಾತ್ಯತೀತ ನಿಲುವಿನಿಂದ ಬೆಂಗಳೂರು ನಗರವನ್ನು ಕಟ್ಟಿದ ನಾಡಪ್ರಭು ಕೆಂಪೇಗೌಡರು ಸರ್ವ ಜನಾಂಗದ ಅಭಿವೃದ್ಧಿ ಹರಿಕಾರರು ಎಂದು ಶಾಸಕ ಬಿ.ಎ. ಬಸವರಾಜ ತಿಳಿಸಿದರು.
ಕ್ಷೇತ್ರದ ವಿಜಿನಾಪುರದಲ್ಲಿ ಏರ್ಪಡಿಸಿದ್ದ 515ನೇ ಕೆಂಪೇಗೌಡರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
![Demo](https://ainlivenews.com/wp-content/uploads/2023/12/spoorthi-1.jpg)
ಕೆಂಪೇಗೌಡರು ಯಾವುದೇ ಕೆಲಸ ಕಾರ್ಯಗಳನ್ನು ಮಾಡುವಾಗ ದೂರದೃಷ್ಟಿ ಹಾಗೂ ಜನರ ಒಳಿತಿಗಾಗಿ ಶ್ರಮಿಸಿದವರು .ದೇಶ, ರಾಜ್ಯ, ಬೆಳೆಯಬೇಕಾದರೆ ನಗರಗಳ ಬೆಳವಣಿಗೆ ಮುಖ್ಯ ಎಂಬುದನ್ನು ಅರಿತಿದ್ದ ಅವರು, ಬೆಂಗಳೂರಿಗೆ ಭದ್ರ ಬೂನಾದಿ ಹಾಕಿದ ನಾಯಕ ಎಂದು ತಿಳಿಸಿದರು.
ಸರ್ವಜನಾಂಗದ ಅಭಿವೃದ್ಧಿಗೆ ಕೆಂಪೇಗೌಡರು ಶ್ರಮಿಸಿದ್ದು, ಒಂದು ಸಮುದಾಯಕ್ಕೆ ಸೀಮಿತರಲ್ಲ ಎಲ್ಲಾ ಸಮುದಾಯದ ಅಭಿವೃದ್ಧಿಗೆ ಶ್ರಮಿಸಿದ ಮಹನೀಯನನ್ನ ಸ್ಮರಣೆ ಮಾಡುವುದು ನಮ್ಮೆಲ್ಲರ ಕರ್ತವ್ಯ ಎಂದು ಹೇಳಿದರು.
ಎಲ್ಲ ಸಮುದಾಯಗಳು ಅಭಿವೃದ್ಧಿಯಾದಗ ಮಾತ್ರ ದೇಶದ ಅಭಿವೃದ್ಧಿ ಸಾದ್ಯ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಎಲ್ಲ ಸಮಾಜದ ಅಭಿವೃದ್ಧಿಗೆ ಬದ್ದವಾಗಿದೆ ಎಂದು ತಿಳಿಸಿದರು.
ಕ್ಷೇತ್ರದಾದ್ಯಂತ ಕಾವೇರಿ ನೀರಿನ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿದ್ದು,ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲಾಗುವುದೆಂದು ನುಡಿದರು.
ಈ ಸಂದರ್ಭದಲ್ಲಿ ಆಯೋಜಕರಾದ ಜೈಭುವನೇಶ್ವರಿ ಸಂಘದ ವಿಜಿನಾಪುರ ವಾರ್ಡನ ಅಧ್ಯಕ್ಷ ಪ್ರದೀಪ್ ಗೌಡ,ಸಂಘದ ರಮೇಶ್ ಗೌಡ,ಎಸ್ ಎಲ್. ವಿ.ಶೇಖರ್,ಮಾಜಿ ಪಾಲಿಕೆ ಸದಸ್ಯ ಶ್ರೀಕಾಂತ್, ಸುಗುಮಾರ್ ಕ್ಷೇತ್ರದ ಅಧ್ಯಕ್ಷ
ಮುನೇಗೌಡ,ಪ್ರಧಾನ ಕಾರ್ಯದರ್ಶಿ
ಲೋಕೆಶ್ ಗೌಡ,ಮುಖಂಡರಾದ ಎಂಎಲ್ ಡಿಸಿ ಮುನಿರಾಜು,ರಾಜಕುಮಾರ, ಹರಿಬಾಬು,ರಾಜುಇದ್ದರು.
![](https://ainlivenews.com/wp-content/uploads/2024/01/Ad-Banner-copy-scaled.jpg)