ಕಲಬುರ್ಗಿ:– ನಗರದ ಪೊಲೀಸ್ ಕಮಿಷನರ್ ಕಚೇರಿ ಆವರಣದಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆ ಬಸ್ ಅನ್ನು ಕಳ್ಳತನ ಮಾಡಲು ಯತ್ನಿಸಿದ್ದ ಘಟನೆ ಜರುಗಿದೆ.
ಗಡಿ ಜಿಲ್ಲೆಯಲ್ಲಿ ಭೀಕರ ಬರ… ಬೆಳಗಾವಿಯಲ್ಲಿ 12 ಆರ್ಒ ಪ್ಲಾಂಟ್ಗಳು ಬಂದ್, ಕೊಳವೆ ಬಾವಿಗಳಲ್ಲೂ ನೀರಿಲ್ಲ!
ಸೋನು ಭಗಿರಥ ಕಳ್ಳತನದ ಆರೋಪಿ ಎನ್ನಲಾಗಿದೆ. ಕೆಎ 32 ಜಿ 1550 ನಂಬರ್ನ ಸಿಆರ್ಪಿಎಫ್ ಪೊಲೀಸರ ಬಸ್ ಅನ್ನು ಕಮಿಷನರ್ ಕಚೇರಿ ಆವರಣದಲ್ಲಿ ನಿಲ್ಲಿಸಲಾಗಿತ್ತು. ಕಳ್ಳ ಸೋನು ಭಗಿರಥ ಕಲಬುರಗಿಯಲ್ಲಿ ಸೆಂಟ್ರಿಂಗ್ ಕೆಲಸ ಮಾಡಿಕೊಂಡಿದ್ದನು. ಸೋಮವಾರ ಕುಡಿದ ನಶೆಯಲ್ಲಿ ಮಧ್ಯರಾತ್ರಿ ಕಮಿಷನರ್ ಕಚೇರಿ ಆವರಣದೊಳಗೆ ಬಂದಿದ್ದಾನೆ. ಬಳಿಕ ಆವರಣದಲ್ಲಿ ನಿಲ್ಲಿಸಿದ್ದ ಸಿಆರ್ಪಿಎಫ್ ಪೊಲೀಸರ ಬಸ್ ಒಳಗಡೆ ಹೋಗಿದ್ದಾನೆ. ಬಸ್ ಓರ್ವ ಕಾನ್ಸ್ಟೇಬಲ್ ಇದ್ದು, ನಿದ್ದೆಗೆ ಜಾರಿದ್ದರು.
ಪೊಲೀಸ್ ಕಾನ್ಸಟೇಬಲ್ ಬಸ್ನ ಕಿಟಕಿಗೆ ತಮ್ಮ ಬಟ್ಟೆ ನೇತು ಹಾಕಿ, ಮಲಗಿದ್ದರು. ಇದನ್ನು ಕಂಡ ಕಳ್ಳ ಸೋನು ಪೊಲೀಸ್ ಕಾನ್ಸಟೇಬಲ್ ಜೇಬಿನಲ್ಲಿದ್ದ ಬಸ್ ಕೀ ತೆಗೆದುಕೊಂಡಿದ್ದಾನೆ. ಬಳಿಕ ಬಸ್ ಸ್ಟಾರ್ಟ್ ಮಾಡುತ್ತಿದ್ದ ಹಾಗೆ ಪೊಲೀಸ್ ಕಾನ್ಸಟೇಬಲ್ ಎಚ್ಚೆತ್ತುಕೊಂಡಿದ್ದಾನೆ. ತಕ್ಷಣ ಪೊಲೀಸ್ ಕಾನ್ಸಟೇಬಲ್ ಆರೋಪಿ ಸೋನು ಭಗಿರಥನನ್ನು ಬಂಧಿಸಿದ್ದಾರೆ.
![](https://ainlivenews.com/wp-content/uploads/2024/01/Ad-Banner-copy-scaled.jpg)