ಬೆಂಗಳೂರು:- ರೇಣುಕಾಸ್ವಾಮಿ ಕೊಲೆ ಕೇಸ್ ಗೆ ಸಂಬಧಪಟ್ಟಂತೆ ದರ್ಶನ್ & ಗ್ಯಾಂಗ್ ಗೆ ಜಾಮೀನು ಸಿಗದಂತೆ ಮಾಡಲು ಖಾಕಿ ತಯಾರಿ ನಡೆಸಿದೆ.
ಜರ್ನಲಿಸಂ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಈ ಸುದ್ದಿ ಮಿಸ್ ಮಾಡ್ದೆ ನೋಡಿ!
ದರ್ಶನ್ ಹಾಗೂ ಸಂಗಡಿಗರ ಬಂಧನವಾಗಿ ಇಂದಿಗೆ ಎರಡು ತಿಂಗಳಾಯ್ತು. ಪ್ರಕರಣದ ತನಿಖೆ ಬಹುತೇಕ ಮುಗಿದಿದ್ದು ಪೊಲೀಸರು ಚಾರ್ಜ್ ಶೀಟ್ ಸಲ್ಲಿಕೆಗೆ ತಯಾರಿ ನಡೆಸುತ್ತಿದ್ದಾರೆ. ಹಲವು ಸಾಕ್ಷ್ಯಗಳ ಒಟ್ಟುಗೂಡಿಸುವಿಕೆ, ಪರಸ್ಪರ ಲಿಂಕ್ ಜೋಡಿಸುವಿಕೆ ಇನ್ನಿತರೆ ಕಾರ್ಯಗಳು ನಡೆಯುತ್ತಿದ್ದು, ಪ್ರಕರಣದಲ್ಲಿ ಎಲ್ಲ ಆರೋಪಿಗಳ ಭಾಗೀಧಾರಿಕೆ, ಕೊಲೆಯಲ್ಲಿ ಪ್ರತಿಯೊಬ್ಬರ ಪಾಲ್ಗೊಳ್ಳುವಿಕೆ. ಪ್ರತಿಯೊಬ್ಬ ಆರೋಪಿಯ ವಿರುದ್ಧ ಇರುವ ಸಾಕ್ಷ್ಯಗಳು ಇವುಗಳನ್ನೆಲ್ಲ ಸವಿಸ್ತಾರವಾಗಿ ಚಾರ್ಜ್ ಶೀಟ್ನಲ್ಲಿ ಪೊಲೀಸರು ಉಲ್ಲೇಖ ಮಾಡಲಿದ್ದಾರೆ.
ದರ್ಶನ್ ಮತ್ತು ಗ್ಯಾಂಗ್ಗೆ ಬೇಗನೆ ಜಾಮೀನು ದೊರೆಯಬಾರದೆಂಬ ಕಾರಣಕ್ಕೆ ಪೊಲೀಸರು ಚಾರ್ಜ್ ಶೀಟ್ ಸಲ್ಲಿಕೆ ತಡ ಮಾಡುತ್ತಿದ್ದಾರೆ ಎಂದು ಕೆಲವು ಆರೋಪಗಳು ಕೇಳಿ ಬಂದಿವೆ. ಸರಳ ಪ್ರಕರಣವಾದರೆ ಅಥವಾ ಒಬ್ಬರೊ ಇಬ್ಬರೊ ಆರೋಪಿಗಳಿದ್ದರೆ ಸಾಮಾನ್ಯವಾಗಿ 30 ದಿನಗಳಲ್ಲಿ ಚಾರ್ಜ್ ಶೀಟ್ ಸಲ್ಲಿಕೆ ಆಗುತ್ತದೆ. ಆದರೆ ಈ ಪ್ರಕರಣದಲ್ಲಿ 17 ಆರೋಪಿಗಳಿದ್ದಾರೆ. ಕೊಲೆ ಆಗುವ ಕೆಲವು ದಿನಗಳ ಮುಂಚಿನಿಂದಲೂ ಯೋಜನೆ ರೂಪಿಸಲಾಗಿದೆ. ಕೊಲೆಯಾದ ಎರಡು ದಿನಗಳ ವರೆಗೆ ಹಲವು ಘಟನೆಗಳು ನಡೆದಿವೆ ಹಾಗಾಗಿ ಸಾಕ್ಷ್ಯ, ಮಹಜರು ಮಾಡಿರುವ ಸ್ಥಳಗಳ ಸಂಖ್ಯೆ ಎಲ್ಲ ಹೆಚ್ಚಿವೆ ಹಾಗಾಗಿ ಸಹಜವಾಗಿಯೇ ಚಾರ್ಜ್ ಶೀಟ್ ಸಲ್ಲಿಕೆ ತಡವಾಗುತ್ತಿದೆ
90 ದಿನಗಳ ಒಳಗಾಗಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಲು ಪೊಲೀಸರು ಸಿದ್ಧರಾಗಿದ್ದಾರೆ. 90 ದಿನಗಳ ಬಳಿಕ ಚಾರ್ಜ್ ಶೀಟ್ ಸಲ್ಲಿಸಿದರೆ ಜಾಮೀನು ಪಡೆದುಕೊಳ್ಳುವ ಹಪ-ಹಪಿಯಲ್ಲಿರುವ ದರ್ಶನ್ ಮತ್ತು ಗ್ಯಾಂಗ್ಗೆ ವರವಾಗಲಿದೆ. ಹಾಗಾಗಿ ಹೇಗಾದರೂ ಮಾಡಿ 90 ದಿನಗಳ ಒಳಗಿಯೇ ಚಾರ್ಜ್ ಶೀಟ್ ಸಲ್ಲಿಸಲು ಪೊಲೀಸರು ಸಿದ್ಧರಾಗಿದ್ದಾರೆ. ಒಂದೊಮ್ಮೆ ವಿವರವಾದ ಚಾರ್ಜ್ ಶೀಟ್ ಸಲ್ಲಿಸಲು 90 ದಿನಗಳಲ್ಲಿ ಸಲ್ಲಿಸಲು ಸಾಧ್ಯವಾಗದೇ ಇದ್ದರೆ, ಪ್ರಾಥಮಿಕ ಚಾರ್ಜ್ ಶೀಟ್ ಅನ್ನಾದರೂ 90 ದಿನಗಳ ಒಳಗೆ ಸಲ್ಲಿಸಿ ಟ್ರಯಲ್ ಅನ್ನು ಆರಂಭಿಸುವ ಯೋಜನೆಯಲ್ಲಿ ಪೊಲೀಸರಿದ್ದಾರೆ.
ಪೊಲೀಸರು ಹೀಗೆ ಮಾಡುವುದರಿಂದ ದರ್ಶನ್ ಜಾಮೀನಿಗೆ ಅರ್ಜಿ ಹಾಕುವುದು ಕಷ್ಟವಾಗುತ್ತದೆ.