Facebook Twitter Instagram YouTube
    ಕನ್ನಡ     English     తెలుగు
    Sunday, January 29
    Facebook Twitter Instagram YouTube
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    ಕನ್ನಡ     English     తెలుగు
    Facebook Twitter Instagram YouTube
    Home » ಚಕ್ರವರ್ತಿ ಚಂದ್ರಚೂಡ ನಿರ್ದೇಶನದ ‘ಪಾದರಾಯ’ ಚಿತ್ರದಲ್ಲಿ ಸುದೀಪ್ ನಟನೆ

    ಚಕ್ರವರ್ತಿ ಚಂದ್ರಚೂಡ ನಿರ್ದೇಶನದ ‘ಪಾದರಾಯ’ ಚಿತ್ರದಲ್ಲಿ ಸುದೀಪ್ ನಟನೆ

    AIN AdminBy AIN AdminDecember 6, 2022
    Share
    Facebook Twitter LinkedIn Pinterest Email

    ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾವನ್ನು ನಿರ್ಮಾಣ ಮಾಡಿದ್ದ ಸುದೀಪ್ ಆಪ್ತ ಸ್ನೇಹಿತ ಹಾಗೂ ನಿರ್ಮಾಪಕ ಜಾಕ್ ಮಂಜು ಇದೀಗ ಮತ್ತೊಂದು ಸಿನಿಮಾ ಘೋಷಣೆ ಮಾಡಿದ್ದಾರೆ. ಇದೊಂದು ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದು, ಸುದೀಪ್ ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಚಕ್ರವರ್ತಿ ಚಂದ್ರಚೂಡ ನಿರ್ದೇಶಿಸುತ್ತಿರುವ ಈ ಚಿತ್ರದಲ್ಲಿ ನಾಯಕನಾಗಿ ನಿರ್ದೇಶಕ ಕಂ ನಟ ನಾಗಶೇಖರ್ ಬಣ್ಣ ಹಚ್ಚುತ್ತಿದ್ದಾರೆ.

    ಕನ್ನಡ, ತಮಿಳು, ತೆಲುಗು, ಮಲಯಾಳಂ  ಹಾಗೂ ಹಿಂದಿ ಐದು ಭಾಷೆಗಳಲ್ಲಿ ತಯಾರಾಗುತ್ತಿರುವ ಸಿನಿಮಾಗೆ ಪಾದರಾಯ ಎಂಬ ಟೈಟಲ್ ಇಡಲಾಗಿದೆ. ಕಾಂತಾರ ನಂತರ ಖ್ಯಾತ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಪಾದರಾಯ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ. ಚಿತ್ರಕ್ಕೆ ಸತ್ಯ ಹೆಗಡೆ ಛಾಯಾಗ್ರಹಣ, ತಮಿಳನ ಖ್ಯಾತ ಸಂಕಲನಕಾರ ಆಂಟೋನಿ ಮುಂತಾದ ಖ್ಯಾತನಾಮರು ಕಾರ್ಯ ನಿರ್ವಹಿಸುತ್ತಿರುವುದು ಸಿನಿಮಾದ ಮತ್ತೊಂದು ವಿಶೇಷ. 

    Demo

    ಚಕ್ರವರ್ತಿ ಚಂದ್ರಚೂಡ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿದ್ದರೆ, ಖ್ಯಾತ ನಿರ್ದೇಶಕ ಹಾಗೂ ನಟ ನಾಗಶೇಖರ್ ನಾಯಕ ನಟನಾಗುವ ಜೊತೆಗೆ ನಿರ್ಮಾಪಕರೂ ಆಗಿದ್ದಾರೆ. ದೇಶ ವ್ಯಾಪಿ ಸುದ್ದಿ ಮಾಡಿದ ನೈಜ ಘಟನೆಯೊಂದರ ಆಧಾರಿತ ಈ ಸಿನಿಮಾ ಹಲವು ಜೀವಂತ ಘಟ್ಟಗಳಿಂದ ಕೂಡಿದ್ದು, ಹಾಗಾಗಿ ಹನುಮ ಜಯಂತಿಯಂದೇ ಶೀರ್ಷಿಕೆ ಬಿಡುಗಡೆ ಮಾಡಿರುವುದಾಗಿ ಚಿತ್ರತಂಡ ಹೇಳಿಕೊಂಡಿದೆ. ಈ ಸಿನಿಮಾ ಜನವರಿಯಿಂದ ಚಿತ್ರೀಕರಣ ಆರಂಭಿಸಲಿದೆ.

    Share. Facebook Twitter LinkedIn Email WhatsApp

    Related Posts

    ದೈವಕ್ಕೆ ಕೋಲ ನೀಡಿದ ಸ್ಯಾಂಡಲ್ ವುಡ್ ನಟಿ ಸಂಗೀತಾ ಶೃಂಗೇರಿ

    January 29, 2023

    ಮಂಗಳೂರಿಗೆ ಬಂದ ಸೂಪರ್ ಸ್ಟಾರ್ ರಜನಿಕಾಂತ್: ತುಳು ನಾಡಿನಲ್ಲಿ ‘ಜೈಲರ್’ ಚಿತ್ರದ ಶೂಟಿಂಗ್

    January 29, 2023

    ವಿಷ್ಣುವರ್ಧನ್ ಗೆ ‘ಕರ್ನಾಟಕ ರತ್ನ’ ನೀಡುವ ಭರವಸೆ ನೀಡಿದ ಸಿಎಂ ಬೊಮ್ಮಾಯಿ

    January 29, 2023

    ಆಸ್ಪತ್ರೆಗೆ ದಾಖಲಾಗಿರುವ ತಾರಖ್ ರತ್ನ ಆರೋಗ್ಯ ವಿಚಾರಸಿಲು ಆಸ್ಪತ್ರೆಗೆ ಭೇಟಿ ನೀಡಿದ ಶಿವಣ್ಣ

    January 29, 2023

    ಮೈಸೂರಿನಲ್ಲಿ ಡಾ.ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆಗೊಳಿಸಿದ ಬೊಮ್ಮಾಯಿ

    January 29, 2023

    ಕನ್ನಡ ಚಿತ್ರರಂಗದ ಹಿರಿಯ ನಟ ಮನದೀಪ್ ರಾಯ್ ನಿಧನ

    January 29, 2023
    © 2022 Copyright � All rights reserved AIN Developed by Notch IT Solutions..
    • Home
    • About Us
    • Contact Us
    • Privacy & Cookies Notice
    • Advertise with Us
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಚಲನಚಿತ್ರ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ಜ್ಯೋತಿಷ್ಯ
    • ತಂತ್ರಜ್ಞಾನ
    • ಕೃಷಿ
    • ವಿಡಿಯೋ
    • ಅರೋಗ್ಯ
    • ಗ್ಯಾಲರಿ
    • ಸಂಸ್ಕೃತಿ

    Type above and press Enter to search. Press Esc to cancel.