ನವದೆಹಲಿ:– ಭವಾನಿ ಅವರ ನಿರೀಕ್ಷಣಾ ಜಾಮೀನು ಕುರಿತ ಅರ್ಜಿ ಇಂದು ಸುಪ್ರೀಂ ಕೋರ್ಟ್ ಮುಂದೆ ವಿಚಾರಣೆಗೆ ಬರಲಿದೆ.
ಡೆಂಗ್ಯೂ ಹಾಟ್ ಸ್ಪಾಟ್ ಆಗ್ತಿದೆ ಬೆಂಗಳೂರು: ಒಂದೇ ದಿನ 91 ಕೇಸ್ ಪತ್ತೆ!
ಕಿಡ್ನಾಪ್ ಪ್ರಕರಣದಲ್ಲಿ ಭವಾನಿ ರೇವಣ್ಣ ಹೈಕೋರ್ಟ್ನಿಂದ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಪಡೆದಿದ್ದರು. ನಿರೀಕ್ಷಣಾ ಜಾಮೀನು ರದ್ದುಗೊಳಿಸಲು ಕೋರಿ ಎಸ್ಐಟಿ ಸುಪ್ರೀಂ ಕೋರ್ಟ್ಗೆ ಬಂದಿದೆ. ಇಂದು ಸುಪ್ರೀಂ ಕೋರ್ಟ್ನಲ್ಲಿ ಈ ಅರ್ಜಿ ವಿಚಾರಣೆ ನಡೆಯಲಿದೆ
ನ್ಯಾ.ಸೂರ್ಯಕಾಂತ್ ನೇತೃತ್ವದ ದ್ವಿಸದಸ್ಯ ಪೀಠದ ಮುಂದೆ ಅರ್ಜಿ ವಿಚಾರಣೆಗೆ ಬರಲಿದೆ. ಎಸ್ಐಟಿ ತಂಡ ದೆಹಲಿಯಲ್ಲಿ ಬೀಡು ಬಿಟ್ಟಿದ್ದು, ಜಾಮೀನು ರದ್ದುಗೊಳಿಸಲು ಹಾಗೂ ರದ್ದಾದರೆ ಕೂಡಲೇ ಭವಾನಿ ಅವರನ್ನು ಬಂಧಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದೆ. ನಿರೀಕ್ಷಣಾ ಜಾಮೀನು ರದ್ದಾದರೆ ಭವಾನಿ ರೇವಣ್ಣ ಅವರನ್ನು ಪೊಲೀಸರು ಕೂಡಲೇ ವಶಕ್ಕೆ ಪಡೆಯುವ ಸಾಧ್ಯತೆ ಇದೆ
ಈಗಾಗಲೇ ಭವಾನಿ ರೇವಣ್ಣ ಅವರ ಇಬ್ಬರು ಮಕ್ಕಳು ಜೈಲಿನಲ್ಲಿದ್ದಾರೆ. ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ (Prajwal Revanna Case) ಪ್ರಕರಣದಲ್ಲಿ ಹಾಗೂ ಸೂರಜ್ ರೇವಣ್ಣ (Suraj Revanna Case) ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲುಪಾಲಾಗಿದ್ದು, ಇಬ್ಬರಿಗೂ ಜಾಮೀನು ಸಿಕ್ಕಿಲ್ಲ.