ಹರಿದ್ವಾರ:- 10 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ನಂತರ ಹಂತಕರು ಹತ್ಯೆ ಮಾಡಿರುವ ಘಟನೆ ಜರುಗಿದೆ.
Karnataka Weather: ನಾಳೆ ಕರ್ನಾಟಕದಲ್ಲಿ ಭಾರೀ ಮಳೆ.. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ..!
ಬಿಜೆಪಿ ಕಾರ್ಯಕರ್ತ ಮತ್ತು ಆತನ ಸಹಚರರು ಆ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ನಂತರ ಹತ್ಯೆ ಮಾಡಿದ್ದಾರೆ ಎಂದರು.
ಮಂಗಳವಾರ ಬೆಳಗ್ಗೆ ಬಹದ್ರಾಬಾದ್ ಪ್ರದೇಶದ ಹೆದ್ದಾರಿಯಲ್ಲಿ ಆ ಬಾಲಕಿಯ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣದ ಪ್ರಮುಖ ಆರೋಪಿ ಆದಿತ್ಯರಾಜ್ ಸೈನಿ ಸ್ಥಳೀಯ ಬಿಜೆಪಿ ಒಬಿಸಿ ಮೋರ್ಚಾ ಸದಸ್ಯನಾಗಿದ್ದ. ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಆದಿತ್ಯ ಕೊಠಾರಿ ನೀಡಿರುವ ಪತ್ರದ ಪ್ರಕಾರ ಮಂಗಳವಾರವೇ ಆತನನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಲಾಗಿದೆ.
ಗ್ರಾಮದ ಮುಖ್ಯಸ್ಥನಾಗಿದ್ದ ಆದಿತ್ಯರಾಜ್ ಭಾನುವಾರ ಸಂಜೆ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದ ತನ್ನ ಮಗಳೊಂದಿಗೆ ಸಂಬಂಧ ಹೊಂದಿದ್ದಾನೆ ಎಂದು ಬಾಲಕಿಯ ತಾಯಿ ಹೇಳಿಕೊಂಡಿದ್ದಾರೆ. ಆಕೆ ಮಗಳ ಮೊಬೈಲ್ಗೆ ಕರೆ ಮಾಡಿದಾಗ ಆದಿತ್ಯರಾಜ್ ರಿಸೀವ್ ಮಾಡಿದ್ದು, ನಿನ್ನ ಮಗಳು ನನ್ನೊಂದಿಗಿದ್ದಾಳೆ ಎಂದು ಹೇಳಿದ್ದ. ಬಳಿಕ ಫೋನ್ ಸ್ವಿಚ್ ಆಫ್ ಆಗಿತ್ತು ಎಂದು ಮೃತ ಬಾಲಕಿಯ ತಾಯಿ ದೂರಿನಲ್ಲಿ ತಿಳಿಸಿದ್ದಾರೆ.
ಮರುದಿನ ಬೆಳಿಗ್ಗೆ ತನಕ ಆ ಬಾಲಕಿ ಮನೆಗೆ ಹಿಂತಿರುಗದ ಹಿನ್ನೆಲೆಯಲ್ಲಿ ಆ ಮಹಿಳೆ ಆದಿತ್ಯನ ಮನೆಗೆ ಹೋಗಿದ್ದಾಳೆ. ಅಲ್ಲಿ ಆರೋಪಿ ಸಹಚರ ಅಮಿತ್ ಸೈನಿ ಸಹ ವಾಸಿಸುತ್ತಿದ್ದ. ಆದರೆ ಆಕೆಯ ಮಗಳು ಎಲ್ಲೂ ಕಾಣಲಿಲ್ಲ. ಈ ವಿಷಯವನ್ನು ಪೊಲೀಸರಿಗೆ ತಿಳಿಸುವುದಾಗಿ ಹೇಳಿದಾಗ, ಆದಿತ್ಯರಾಜ್ ಹಾಗೆ ಮಾಡದಂತೆ ಒತ್ತಡ ಹೇರಿದ ಮತ್ತು ಹಾಗೆ ಮಾಡಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ.
ಆದರೆ, ಬಾಲಕಿಯ ತಾಯಿ ಸೋಮವಾರ ಪೊಲೀಸರಿಗೆ ತನ್ನ ಮಗಳು ನಾಪತ್ತೆಯಾಗಿದ್ದಾಳೆ ಎಂದು ದೂರು ನೀಡಿದ್ದಾಳೆ. ಮಂಗಳವಾರ ಮಗಳ ಶವ ಪತ್ತೆಯಾದ ನಂತರ, ಆದಿತ್ಯರಾಜ್ ಮತ್ತು ಅಮಿತ್ ಸೇರಿ ತನ್ನ ಮಗಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಕೊಂದಿದ್ದಾರೆ ಎಂದು ಆಕೆ ಆರೋಪಿಸಿದ್ದಾರೆ.