ದೊಡ್ಡಬಳ್ಳಾಪುರ : ಪೋಟೋ ಶೂಟ್ ಮಾಡುವ ವೇಳೆ ಎರಡು ಗುಂಪುಗಳ ನಡುವೆ ಜಗಳವಾಗಿದ್ದು, ಗಲಾಟೆಯ ಅವೇಶದಲ್ಲಿ ಯುವಕನ ಎದೆಗೆ ಚಾಕುವಿನಿಂದ ಚುಚ್ಚಿ ಕೊಲೆ ಮಾಡಲಾಗಿದೆ. ದೊಡ್ಡಬಳ್ಳಾಪುರ ತಾಲೂಕಿನ ರಾಮೇಶ್ವದ ಬಳಿ ಇರುವ ಡಾಬಾದ ಮುಂಭಾಗದಲ್ಲಿ ಇಂದು ಸಂಜೆ ಘಟನೆ ನಡೆದಿದ್ದು, ಘಟನೆಯಲ್ಲಿ ದೊಡ್ಡಬಳ್ಳಾಪುರ ನರಗದ ಕಛೇರಿಪಾಳ್ಯದ ನಿವಾಸಿ ಸೂರ್ಯ (22) ಕೊಲೆಯಾಗಿದ್ದಾನೆ, ಮೃತ ಯುವಕ ಐಟಿಐ ವಿದ್ಯಾರ್ಥಿಯಾಗಿದ್ದು, ದೀಪಾವಳಿಯ ರಜೆ ಹಿನ್ನಲೆ ಪೋಟೋ ಶೂಟ್ ಗಾಗಿ ಹೋಗಿದ್ದ ವೇಳೆ ಘಟನೆ ನಡೆದಿದೆ.
ಕೊಡಗು: ದೇವಸ್ಥಾನ ಆವರಣದಲ್ಲಿ ಪುರಾತನ ಆಭರಣ, ನಿಧಿ ಪತ್ತೆ
ಕೊಲೆಯಾದ ಯುವಕ ಸೂರ್ಯ ರಿಲ್ಸ್ ಗಳನ್ನ ಮಾಡುತ್ತಿದ್ದ, ರಿಲ್ಸ್ ಗಾಗಿ ವಿಡಿಯೋ ಮಾಡಲು ಮತ್ತು ಪೋಟೋ ಶೂಟ್ ಆತ ಇಂದು ಸ್ನೇಹಿತರ ಜೊತೆ ರಾಮೇಶ್ವರದ ಬಳಿಯ ಡಾಬಾಕ್ಕೆ ಹೋಗಿದ್ದ, ಡಾಬಾಗ ಮುಂಬಾಗದ ಅಲಂಕಾರಿಕ ಸೀನರಿ ಮುಂದೆ ಪೋಟೋ ಸೂಟ್ ಮಾಡಲಾಗುತ್ತಿತ್ತು, ಈ ವೇಳೆ ಯುವಕರ ಮತ್ತೊಂದು ಗುಂಪು ಪೋಟೋ ತೆಗೆಯುವಂತೆ ಕಿರಿಕ್ ತೆಗೆದಿದೆ, ಈ ಗಲಾಟೆಯಲ್ಲಿ ಅಪರಿಚಿತ ಯುವಕರ ಗ್ಯಾಂಗ್ ನಲ್ಲಿದ್ದ ಯುವಕನೊಬ್ಬ ಸೂರ್ಯನ ಎದೆಗೆ ಚಾಕುವಿನಿಂದ ಚುಚ್ಚಿದ್ದಾನೆ, ಗಾಯಗೊಂಡಿದ್ದ ಸೂರ್ಯನನ್ನ ಆಸ್ಪತ್ರೆಗೆ ಸಾಗಿಸಲಾಗಿತು, ಆದರೆ ತೀರ್ವ ರಕ್ತಸ್ರಾವದಿಂದ ಸೂರ್ಯ ಸಾವನ್ನಪ್ಪಿದ್ದಾನೆ, ಸ್ಥಳಕ್ಕೆ ದೊಡ್ಡಬೆಳವಂಗಲ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.