ಕೋಲಾರ : ನಗರ ಪ್ರದೇಶದಲ್ಲಿ ನಿವೇಶನ, ಮನೆ, ಸೇರಿದಂತೆ ಹಲವು ರೀತಿಯ ಆಸ್ತಿಗಳನ್ನು ಹೊಂದಿರುವವರು ದಾಖಲೆ ಸಮೇತ ನಗರಸಭೆ ಕಛೇರಿಗೆ ತೆರಳಿ ಅರ್ಜಿ ಸಲ್ಲಿಸಿದರೆ ಕೂಡಲೇ ಇ ಖಾತಾ ಮಾಡಿಕೊಡುವ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು.
ಗುಡಾಣದಂತಿರೋ ಹೊಟ್ಟೆ ಕರಗಿಸಲು ಚಹಾ’ದಲ್ಲಿ ಇವುಗಳನ್ನು ಬೆರೆಸಿ ಕುಡಿರಿ!
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಕೋಲಾರ ನಗರವು ಜಿಲ್ಲಾ ಕೇಂದ್ರವಾಗಿದ್ದು, ನಗರ ಪ್ರದೇಶದ ವ್ಯಾಪ್ತಿಯಲ್ಲಿರುವ ಎಲ್ಲಾ ನಾಗರೀಕರು ತಾವು ಹೊಂದಿರುವ ಆಸ್ತಿಗಳಿಗೆ ಖಾತೆ ಮಾಡಿಸಲು ನಗರಸಭೆ ಕಛೇರಿಗೆ ಅಲೆ ಯುತ್ತಿರುವುದನ್ನು ತಪ್ಪಿಸುವ ಸಲುವಾಗಿ ರಾಜ್ಯ ಸರ್ಕಾರದಿಂದ ನಕ್ಷಾ ಯೋಜನೆಗೆ ಕೋಲಾರ ನಗರವನ್ನು ಆಯ್ಕೆ ಮಾಡಲಾಗಿದೆ. ಈ ನಿಟ್ಟಿನಲ್ಲಿ ಪ್ರಾಯೋಗಿಕವಾಗಿ ಫೆ.18 ರಂದು ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಅಧಿಕೃತವಾಗಿ ಚಾಲನೆ ನೀಡಿಲಿದ್ದಾರೆ ಎಂದು ತಿಳಿಸಿದರು.
ಫೆ.18 ರಿಂದ ಮೂರು ತಿಂಗಳ ಕಾಲ ಖಾತೆ ಅಭಿಯಾನ ಹಮ್ಮಿಕೊಳ್ಳಲಾಗಿದೆ ಖಾತೆ ಮಾಡಿಸಿಕೊಳ್ಳಲು ಯಾವುದೇ ಮಧ್ಯವರ್ತಿಗಳನ್ನು ನಂಬಬೇಡಿ ನಂಬಿದಲ್ಲಿ ಮೋಸ ಹೋಗುತ್ತೀರಿ ಖಾತೆ ಮಾಡಲು ಯಾವುದೇ ಏಜೆಂಟರ ನೇಮಸಿರೋದಿಲ್ಲ ನೇರವಾಗಿ ಸಾರ್ವಜನಿಕರೇ ನಗರಸಭೆ ಕಛೇರಿಗೆ ತೆರಳಿ ದಾಖಲೆಗಳನ್ನು ಸಲ್ಲಿಸಿ ಕೂಡಲೇ ನಿಮ್ಮ ಮನೆಗಳ ಹಾಗೂ ಖಾಲಿ ನಿವೇಶನಗಳನ್ನು ಖಾತೆಗಳನ್ನು ಮಾಡಿಕೊಡಲಾಗುತ್ತದೆ ಎಂದು ಹೇಳಿದರು..