ಹಾವೇರಿ: ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಪ್ರಚಾರ ಆರಂಭಿಸಿದ್ದು, ರಾಣೆಬೆನ್ನೂರು ತಾಲೂಕು ಅಸುಂಡಿ ಗ್ರಾಮದಲ್ಲಿ ಮಾದ್ಯಮಗಳಿಗೆ ಬಸವರಾಜ ಬೊಮ್ಮಾಯಿ ಮಾತನಾಡಿದ್ದಾರೆ. ಕೋಲಾರದಲ್ಲಿ ಬಹಳ ವರ್ಷಗಳಿಂದ ಎರಡು ಗುಂಪುಗಾರಿಕೆ ಇದೆ.
ಡಿಕೆ ಶಿ ನಮ್ಮ ಪಕ್ಷದ ಭಿನ್ನಮತದ ಬಗ್ಗೆ ಬಹಳ ಕಮೆಂಟ್ ಮಾಡ್ತಾ ಇದ್ದರು. ಡಿಕೆ ಶಿವಕುಮಾರ್ ಈಗೇನು ಹೇಳ್ತಾರೆ? ಎಂದು ಪ್ರಶ್ನಿಸಿದರು. ಬೊಮ್ಮಾಯಿ ದಾವಣಗೆರೆ ಚಾರ್ಲಿ ಎಂಬ ಹೆಚ್ ಕೆ ಪಾಟೀಲ್ ಹೇಳಿಕೆ ವಿಚಾರಕ್ಕೆ ಹೆಚ್ ಕೆ ಪಾಟೀಲ್ ನಮ್ಮ ಹಿರಿಯರು,
ಚುನಾವಣೆ ಸಂದರ್ಭದಲ್ಲಿ ವಯಕ್ತಿಕ ವಿಚಾರ ಚರ್ಚೆ ಮಾಡ್ತಾ ಇದ್ದಾರೆ. ಅವರು ಈ ವಯಸ್ಸಿನಲ್ಲಿ ಮಂತ್ರಿಗಿರಿಯಲ್ಲಿದ್ದಾರೆ, ನಾನು ಸಂಸದ ಆಗಿ ಕೆಲಸ ಮಾಡೋಕೆ ಏನು ತೊಂದರೆ ಇದೆ? ಅವರಿಗೆ ಬೇರೆ ಏನೂ ಮಾತಾಡೋಕೆ ಅವಕಾಶ ಇಲ್ಲ, ಅವರು ನಮ್ಮ ಹಿರಿಯರು, ಅವರಿಗೆ ಒಳ್ಳೆದಾಗಲಿ ಎಂದು ಹೇಳಿದರು.