ಕೋಲಾರ:- ತಹಶೀಲ್ದಾರ್ ಕಾರು,ಖಾಸಗಿ ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿದ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಚೆಲ್ದಿಗಾನಹಳ್ಳಿ ಗ್ರಾಮದ ಬಳಿ ಜರುಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
Breaking News: ನಾನು ಯಾವ ಪಕ್ಷದವನೂ ಅಲ್ಲ -ನಟ ಪ್ರಕಾಶ ರೈ..!
ಶ್ರೀನಿವಾಸಪುರ ತಹಶೀಲ್ದಾರ್ ಸುಧೀಂದ್ರ ರವರು ಇದ್ದ ಕಾರು ಎನ್ನಲಾಗಿದ್ದು, ಅಪಘಾತದಲ್ಲಿ ತಹಶೀಲ್ದಾರ್ ಕಾರು ಟೈಯಲ್ ಬ್ಲಾಸ್ಟ್ ಆಗಿ ಕಾರು ಸ್ವಲ್ಪಮಟ್ಟಿಗೆ ಜಕಂ ಆಗಿದೆ. ದ್ವಿಚಕ್ರ ವಾಹನ ಸವಾರನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಘಟನಾ ಸ್ಥಳಕ್ಕೆ ಶ್ರೀನಿವಾಸಪುರ ಪಟ್ಟಣ ಪೊಲೀಸರು ಭೇಟಿ ಪರಿಶೀಲನೆ ಮಾಡಿದ್ದಾರೆ.