ಕೋಲಾರ:- ಮತಗಟ್ಟೆಯನ್ನು ನಮ್ಮ ಗ್ತಾಮದಲ್ಲೆ ಸ್ಥಾಪಿಸಬೇಕು ಎಂದು ಆಗ್ರಹಿಸಿ ಮತದಾನ ಬಹಿಷ್ಕಾರ ಮಾಡಲಾಗಿದೆ.
ಕೋಲಾರ ತಾಲೂಕಿನ ಕೃಷ್ಣಾಪುರ ಗ್ರಾಮಸ್ಥರಿಂದ ಮತದಾನ ಬಹಿಷ್ಕಾರದ ಎಚ್ಚರಿಕೆ ನೀಡಲಾಗಿದೆ.
ಕೃಷ್ಣಾಪುರ ಗ್ರಾಮದ ಮತಗಟ್ಟೆಯನ್ನು ಪಕ್ಕದ ಗ್ರಾಮವಾದ ಅಮ್ಮನಲ್ಲೂರಿಗೆ ವರ್ಗಾಯಿಸಲಾಗಿದೆ.ಇದಕ್ಕೆ ಆಕ್ರೋಷ ವ್ಯಕ್ತಪಡಿಸಿರುವ ಗ್ರಾಮಸ್ಥರು ಮತದಾನ ಬಹಿಷ್ಕಾರಕ್ಕೆ ನಿರ್ಧರಿಸಿದ್ದಾರೆ
ಗ್ರಾಮದಲ್ಲಿ ೨೦೦ ಮನೆಗಳಿದ್ದು, 360ಕ್ಕೂ ಹೆಚ್ಚು ಮತದಾರರಿದ್ದಾರೆ. ಕೋಲಾರ ಚಿಕ್ಕಬಳ್ಳಾಪುರ ಜಿಲ್ಲೆಯ ಗಡಿ ಗ್ರಾಮ ಕೃಷ್ಣಾಪುರ .ಹೀಗಾಗಿ ಮತದಾರರ ಸಂಖ್ಯೆ ಕಡಿಮೆ ಇರುವ ಕಾರಣ ನೀಡಿ ಅಮ್ಮನಲ್ಲೂರು ಗ್ರಾಮಕ್ಕೆ ಮತಗಟ್ಟೆ ವರ್ಗಾವಣೆಯನ್ನು ಮಾಡಲಾಗಿದೆ .
ಆದರೆ 3 ಕಿಲೋ ಮೀಟರ್ ದೂರವಿರುವ ಅಮ್ಮನಲ್ಲೂರು ಗ್ರಾಮಕ್ಕೆ ಬಸ್ ಸೌಲಭ್ಯವಿಲ್ಲ . ಬಿರು ಬಿಸಿಲಿನಲ್ಲಿ ಬೇರೆ ಗ್ರಾಮಕ್ಕೆ ಮತದಾನಕ್ಕೆ ಹೋಗಲು ಸಾಧ್ಯವಾಗಲ್ಲ. ಕಳೆದ ಎಲ್ಲಾ ಚುನಾವಣೆಯಲ್ಲಿ ನಮ್ಮ ಗ್ರಾಮದಲ್ಲಿಯೇ ಮತದಾನ ಮಾಡಿದ್ದೇವೆ ಹಾಗಾಗಿ ತಮ್ಮ ಗ್ರಾಮದಲ್ಲಿಯೇ ಮತಗಟ್ಟೆ ಸ್ಥಾಪಿಸಬೇಕೆಂದು ಗ್ರಾಮಸ್ಥರ ಒತ್ತಾಯವಾಗಿದೆ.ಹಾಗಾಗಿ ಈ ಭಾರಿಯ ಚುನಾವಣೆಯಲ್ಲಿ ತಮ್ಮ ಗ್ರಾಮದಲ್ಲಿ ಯಾವುದೇ ಪಕ್ಷದ ಅಭ್ಯರ್ಥಿಗಳು ಚುನಾವಣಾ ಪ್ರಚಾರ ಮಾಡುವಂತಿಲ್ಲ
ಕೃಷ್ಣಾಪುರ ಗ್ರಾಮಸ್ಥರು ಸಹ ಯಾವುದೇ ಪಕ್ಷದ ಪರ ಪ್ರಚಾರದಲ್ಲಿ ಭಾಗವಹಿಸಯವುದಿಲ್ಲ ಎಂದು ಸ್ಪಷ್ಟಪಡಿಸಿರುವ ಗ್ರಾಮಸ್ಥರು, ಗ್ರಾಮದಲ್ಲಿ ಮತಗಟ್ಟೆ ಸ್ಥಾಪಿಸಲು ಈಗಲೂ ಅವಕಾಶ ಇದ್ದು ಇದನ್ಜು ನಮ್ಮ ಮನವಿ ಪುರಸ್ಕಾರ ಮಾಡಬೇಕು ಎಂದು ಆಗ್ರಹಿಸಿದ್ದಾರೆ.