ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ತನ್ನ ನೌಕರರಿಗೆ ಗುಡ್ನ್ಯೂಸ್ ಕೊಟ್ಟಿದೆ. ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ರಸ್ತೆ ಅಪಘಾತಗಳನ್ನು ತಪ್ಪಿಸುವ ಉದ್ದೇಶದಿಂದ ನೌಕರರಿಗೆ ಡಬಲ್ ಡ್ಯೂಟಿಯಿಂದ ಮುಕ್ತಿ ನೀಡಿದೆ.
ಇಂದಿನಿಂದಲೇ (ಮಾ.28) ರಾತ್ರಿ ಮತ್ತು ದೂರ ಪ್ರಯಾಣದಲ್ಲಿ ವಿಶ್ರಾಂತಿ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ. ಅಲ್ಲದೇ ಕೆಲಸದ ಅವಧಿ ದಿನದಲ್ಲಿ 8 ಗಂಟೆ, ವಾರದಲ್ಲಿ 48 ಗಂಟೆ ಮೀರದಂತೆ ಸೂಚಿಸಿದೆ.
https://ainlivenews.com/arrest-accused-who-made-fake-bomb-threat-arrested-the-police-were-shocked-when-they-asked-him-why
ಇತ್ತೀಚಿನ ದಿನಗಳಲ್ಲಿ ಬಸ್ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿದ್ದು, ಅಪಘಾತಕ್ಕೆ ಕಾರಣ ತಿಳಿಯಲು ಕೆಎಸ್ಆರ್ಟಿಸಿ ಪ್ರತ್ಯೇಕ ಸಮಿತಿ ಮೂಲಕ ತನಿಖೆ ನಡೆಸಿತ್ತು. ಇದಕ್ಕೆ ಕಾರಣಗಳನ್ನು ಹುಡುಕಿದಾಗ ಡಬಲ್ ಡ್ಯೂಟಿ ಮತ್ತು ರಾತ್ರಿ ವೇಳೆ ವಿಶ್ರಾಂತಿ ನೀಡದಿರುವುದೇ ಕಾರಣ ಅನ್ನೋದು ತಿಳಿದುಬಂದಿತು. ಸರಿಯಾಗಿ ನಿದ್ರೆ ಇಲ್ಲದೇ, ಬಸ್ ಚಾಲನೆ ಮಾಡಲು ಸಾಧ್ಯವಾಗದೇ, ಅಪಘಾತಗಳು ಸಂಭವಿಸುತ್ತಿವೆ ಎಂದು ಸಮಿತಿ ನೀಡಿದ ವರದಿಯಲ್ಲಿ ತಿಳಿದುಬಂದಿತು ಎಂದು ಸಾರಿಗೆ ನಿಗಮ ತಿಳಿಸಿದೆ. ಅಪಘಾತಗಳನ್ನು ತಡೆಗಟ್ಟುವ ಸಲುವಾಗಿ ತನ್ನ ನೌಕರರಿಗೆ ಡಬಲ್ ಡ್ಯೂಟಿಯಿಂದ ಮುಕ್ತಿ ನೀಡಿದೆ ಎಂದು ಹೇಳಿದೆ.