ಬೆಂಗಳೂರು:– ರಾಜಕೀಯವನ್ನು ಭ್ರಷ್ಟೋಧ್ಯಮವನ್ನಾಗಿ ಮಾಡಿಕೊಂಡ ಕೀರ್ತಿ ಕುಮಾರಸ್ವಾಮಿಗೆ ಸಲ್ಲುತ್ತದೆ ಎಂದು ಕಾಂಗ್ರೆಸ್ ಹೇಳಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ಟ್ವೀಟ್ ಮಾಡಿರುವ ಕಾಂಗ್ರೆಸ್, ಜೆಡಿಎಸ್ ಪಕ್ಷದ ಶಾಸಕರು ಹಣ ಕೊಟ್ಟು ಮತ ಪಡೆದಿದ್ದಾರೆ, ಹಣ ಪಡೆದು ಮತ ನೀಡುತ್ತಾರೆ, ಕುಮಾರಸ್ವಾಮಿಯವರು ಹಣ ವಸೂಲಿ ಮಾಡಿ ಟಿಕೆಟ್ ನೀಡುತ್ತಾರೆ. ಇದನ್ನು ಅವರೇ ಒಪ್ಪಿಕೊಂಡಿದ್ದು. ಫ್ಯಾಮಿಲಿ ಟ್ರಸ್ಟ್ ನಂತಿರುವ ಜೆಡಿಎಸ್ ಪಕ್ಷಕ್ಕಾಗಿ ಪಡೆದ ಹಣ ಕುಮಾರಸ್ವಾಮಿಯವರ ಜೇಬಿಗೆ ಹೋಗುತ್ತದೆಯಲ್ಲವೇ ಎಂದು ಹೇಳಿದೆ.
ರಾಜಕೀಯವನ್ನು ಭ್ರಷ್ಟೋಧ್ಯಮವನ್ನಾಗಿ ಮಾಡಿಕೊಂಡ ಕೀರ್ತಿ ಹೆಚ್ಡಿ ಕುಮಾರಸ್ವಾಮಿ ಅವರಿಗೆ ಸಲ್ಲುತ್ತದೆ. ಟಿಕೆಟ್ ಅಕ್ಷಾಂಕ್ಷಿಗಳಲ್ಲೇ ಸೂಟ್ ಕೇಸ್ ಪಡೆದ ತಾವು ಅಧಿಕಾರದಲ್ಲಿ ಕಂಟೈನರ್ ನಲ್ಲಿ ವಸೂಲಿ ಮಾಡಿಲ್ಲವೇ? ಎಂದು ಕುಮಾರಸ್ವಾಮಿ ಅವರನ್ನು ಕಾಂಗ್ರೆಸ್ ಪ್ರಶ್ನಿಸಿದೆ.
ಇನ್ನೂ ಹೆಚ್ಡಿ ಕುಮಾರಸ್ವಾಮಿ ಮತ್ತು ಕಾಂಗ್ರೆಸ್ ನಡುವೆ ಮಾತಿನ ಯುದ್ದ ನಡೆಯುತ್ತಲೇ ಇದೆ. ಟೀಕೆಗೆ ಪ್ರತಿ ಟೀಕೆ ನಡೆಯುತ್ತಲೇ ಇದೆ. ಇದೀಗ ಕಾಂಗ್ರೆಸ್ ವಿರುದ್ಧ ಮುಗಿಬೀಳುತ್ತಿರುವ ಕುಮಾರಸ್ವಾಮಿಗೆ ಟಕ್ಕರ್ ಕೊಟ್ಟ ಕರ್ನಾಟಕ ಕಾಂಗ್ರೆಸ್ ಘಟಕ, ರಾಜಕೀಯವನ್ನು ಭ್ರಷ್ಟೋಧ್ಯಮವನ್ನಾಗಿ ಮಾಡಿಕೊಂಡ ಕೀರ್ತಿ ಕುಮಾರಸ್ವಾಮಿ ಅವರಿಗೆ ಸಲ್ಲುತ್ತದೆ ಎಂದು ಜರಿದಿದೆ.