ಮಂಡ್ಯ :- ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆಗೆ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಇಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸೋದಿಲ್ಲ. ಶೀಘ್ರ ಬಿಜೆಪಿ ಪಕ್ಷ ಸೇರ್ಪಡೆಯಾಗಲಿದ್ದು, ಪಕ್ಷದ ನಿಲುವಿಗೆ ಬದ್ಧ ಎನ್ನುವ ಮೂಲಕ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಪರೋಕ್ಷವಾಗಿ ಬೆಂಬಲ ನೀಡುವುದಾಗಿ ಸಂಸದೆ ಸುಮಲತಾ ಅಂಬರೀಶ್ ಬುಧವಾರ ಘೋಷಣೆ ಮಾಡಿದ್ದಾರೆ. ಈ ಮೂಲಕ ಹೆಚ್.ಡಿ.ಕುಮಾರಸ್ವಾಮಿಗೆ ನಾಮಪತ್ರ ಸಲ್ಲಿಸಲು ಹಾದಿ ಸುಗಮಗೊಳಿಸಿದ್ದರು.
ಈ ಹಿನ್ನಲೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆಗೂ ಮುನ್ನಾ ಬುಧವಾರ ಮಧ್ಯಾಹ್ನ ಜಿಲ್ಲೆಯ ಹಿರಿಯ ರಾಜಕೀಯ ಮುತ್ಸದ್ದಿಗಳಾದ ಮಾಜಿ ಶಾಸಕರಾದ ದಿ.ಪುಟ್ಟಣ್ಣಯ್ಯ, ಚೌಡಯ್ಯ, ಕೆ.ವಿ.ಶಂಕರೇಗೌಡ, ಎಸ್.ಡಿ.ಜಯರಾಂ, ಜಿ.ಮಾದೇಗೌಡ, ಅಂಬರೀಶ್ ಅವರುಗಳ ಸಮಾಧಿಗಳಿಗೆ ತೆರಳಿ ಕುಮಾರಸ್ವಾಮಿ ನಮನ ಸಲ್ಲಿಸಲಿದ್ದಾರೆ. ಇಂದು ಬೆಳಿಗ್ಗೆ ಮಂಡ್ಯ ನಗರದ ಶ್ರೀ ಅರ್ಕೇಶ್ವರ, ಶ್ರೀ ಕಾಳಿಕಾಂಬ, ಶ್ರೀ ಲಕ್ಷ್ಮಿ ಜನಾರ್ದನ ದೇವಸ್ಥಾನ, ನಂತರ ಕಾವೇರಿ ಪ್ರತಿಮೆ,
Child Falls Into Borewell: ಕೊಳವೆ ಬಾವಿಗೆ ಬಿದ್ದ ಕಂದನ ನರಳಾಟ..! ಕ್ಯಾಮೆರಾದಲ್ಲಿ ಸೆರೆಯಾಯ್ತು ಮಗುವಿನ ಕಾಲು
ಡಾ. ಬಿ.ಆರ್. ಅಂಬೇಡ್ಕರ್, ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಬಾಬು ಜಗಜೀವನರಾಂ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿ ರಾಜ್ಯ ಮಟ್ಟದ ಮೈತ್ರಿ ನಾಯಕರ ಜೊತೆಗೂಡಿ ತೆರಳಿ ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ, ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿ ಮಂಡ್ಯ ವಿಶ್ವ ವಿದ್ಯಾನಿಲಯದ ಆವರಣದಲ್ಲಿ ಬೃಹತ್ ಸಮಾವೇಶದಲ್ಲಿ ಭಾಗಿಯಾಗಲಿ ದ್ದಾರೆ. ಸಮಾವೇಶದಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಸೇರಿ ಜಿಲ್ಲೆಯ ಜೆಡಿಎಸ್, ಬಿಜೆಪಿ ನಾಯಕರು ಭಾಗಿಯಾಗಲಿದ್ದಾರೆ.