ಬೆಂಗಳೂರು:- ಪುರುಷ ಪ್ರಯಾಣಿಕರಿಗೆ KSRTC ಗುಡ್ ನ್ಯೂಸ್ ಕೊಟ್ಟಿದೆ.
ಮಗಳ ಮದುವೆ ಮುಗಿಸಿ ಪ್ರಾಣಬಿಟ್ಟ ತಂದೆ; ತೆಲಂಗಾಣದಲ್ಲಿ ಹೃದಯವಿದ್ರಾವಕ ಘಟನೆ
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಶಕ್ತಿ ಯೋಜನೆ ಜಾರಿಗೆ ಬಂದ ಮೇಲೆ ಕೆ.ಎಸ್.ಆರ್.ಟಿ.ಸಿ ಬಸ್ ಗಳಲ್ಲಿ ಮಹಿಳೆಯರು ಹೆಚ್ಚು ಓಡಾಡುವುದಕ್ಕೆ ಶುರು ಮಾಡಿದ್ದು, ಪುರುಷರಿಗೆ ಬಸ್ ಗಳಲ್ಲಿ ಸೀಟಗಳು ಸಿಗುತ್ತಿರಲಿಲ್ಲ. ಈ ಕಾರಣದಿಂದ ಮೈಸೂರಿನ ವಿಷ್ಣುವರ್ಧನ್ ಎಂಬುವವರು ಎರಡು ಮೂರು ಬಾರಿ ದೂರು ನೀಡಿದ್ದರು. ಕೆ.ಎಸ್.ಆರ್.ಟಿ.ಸಿ ಸಂಸ್ಥೆಯ ಬಸ್ಗಳಲ್ಲಿ ಬಹುತೇಕ ಮಹಿಳೆಯರೇ ಕುಳಿತುಕೊಂಡಿರುತ್ತಾರೆ. ನಮಗೆ ಸೀಟು ಸಿಗುತ್ತಿಲ್ಲ, ಹೀಗಾಗಿ ನಮಗೂ ಕುಳಿತುಕೊಳ್ಳಲು ಸೀಟು ಕೊಡಿ ಎಂದು ದೂರಿನಲ್ಲಿ ಮನವಿ ಮಾಡಿದ್ದರು.
ವಿಷ್ಣುವರ್ಧನ್ ಅವರ ಈ ದೂರಿನ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿ ಮೈಸೂರು ಘಟಕದಿಂದ ಕಾರ್ಯಾಚರಣೆಗೊಳ್ಳುವ ಎಲ್ಲಾ ಬಸ್ಗಳಲ್ಲಿಯೂ ಪುರುಷರಿಗೆ ಮೀಸಲಿರುವ ಸೀಟ್ನಲ್ಲಿ ಪುರುಷರೇ ಕುಳಿತುಕೊಳ್ಳುವಂತೆ ನೋಡಿಕೊಳ್ಳಿ ಅಂತ ಆಯಾ ಘಟಕಗಳ ನಿಯಂತ್ರಣಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.