ಗದಗ: ಲೋಕ ಸಭಾ ಚುನಾವಣೆಯ ಹೊತ್ತಲ್ಲಿ ಅಕ್ರಮ ಸಾಗಾಟ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಚುನಾವಣಾ ಅಧಿಕಾರಿಗಳು ಕಣ್ಣು ತಪ್ಪಿಸಿ ಸೀರೆ, ಹಣ, ಬೆಳೆಬಾಳುವ ವಸ್ತುಗಳ ಸಾಗಾಟ ನಡೆಯುತ್ತಿದೆ. ಇದೀಗ ಅಂತಹದ್ದೇ ಪ್ರಕರಣವೊಂದು ಮುನ್ನೆಲೆಗೆ ಬಂದಿದ್ದು,
ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ರಾಮಗೇರಿ ಚೆಕ್ ಪೋಸ್ಟ್ ನಲ್ಲಿ ಸಾರಿಗೆ ಸಂಸ್ಥೆ ಬಸ್ ನಲ್ಲಿ ಐದು ಲಕ್ಷ ರೂಪಾಯಿ ಹಣ ಸಾಗಿಸುವಾಗ ಸೀಜ್ ಮಾಡಲಾಗಿದೆ. ಬಸ್ ನಲ್ಲಿ ಹಣ ತಗೆದುಕೊಂಡು ಸೈಯದಬ್ದುಲ್ ರಜಾಕ್ ಹೊರಟಿದ್ದ ವ್ಯಕ್ತಿಯಾಗಿದ್ದು, ಸೂಕ್ತ ದಾಖಲೆ ಇಲ್ಲದ ಕಾರಣ ಹಣ ಸೀಜ್ ಮಾಡಲಾಗಿದೆ. ಲಕ್ಷ್ಮೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ಮಾಡಲಾಗಿದೆ.