ಚಿಕ್ಕಮಗಳೂರು: ಗ್ಯಾರಂಟಿಗಳಿಂದ ಜನ ನೆಮ್ಮದಿಯಿಂದ ಇದ್ದಾರೆಂದು ಜಾಹೀರಾತು ಪ್ರಕಟಿಸಿದ್ದಾರೆ. ಗ್ಯಾರಂಟಿ ಯೋಜನೆಗಳ ಬಗ್ಗೆ ಸಾಕಷ್ಟು ಜಾಹೀರಾತು ಪ್ರಕಟಿಸಿದ್ದೀರಿ. ಜನ ನೆಮ್ಮದಿಯಿಂದ ಇದ್ದಾರಾ ಇಲ್ಲ ಅಂತ ಜಾಹೀರಾತನಿಂದ ತಿಳಿಯಲ್ಲ. ರಾಜ್ಯದಲ್ಲಿ ಅಕ್ರಮಗಳು, ಅಪರಾಧ ಚಟುವಟಿಗಳು ಹೆಚ್ಚುತ್ತಿವೆ. ರಾಜ್ಯದಲ್ಲಿ ಜನ ನೆಮ್ಮದಿಯಿಂದ ಬದುಕುವುದು ಕಷ್ಟಕರವಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಹೇಳಿದರು.
ನಿಮ್ಮ ಮಗನನ್ನು ಆಶ್ರಯ ಕಮಿಟಿ ಅಧ್ಯಕ್ಷರಾಗಿ ಮಾಡಿದ್ದೀರಿ. ಅದಕ್ಕೆ ನಮ್ಮ ತಕರಾರು ಇಲ್ಲ. ಆಶ್ರಯ ಕಮಿಟಿ ಅಧ್ಯಕ್ಷರು ಅಧಿಕಾರಿಗಳನ್ನು ಕರೆದು ಸಭೆ ಮಾಡಬಹುದಾ? ‘ಹಲೋ ಅಪ್ಪಾ’ ಹೇಳಿಕೆಗೆ ಸ್ಪಷ್ಟನೆ ನೀಡಲು ಪರದಾಡುತ್ತಿದ್ದಾರೆ. ಎರಡು ದಿನದಿಂದ ಅವರ ಗೋಳಾಟ ನೋಡಿದ್ದೇನೆ. ನಿಮ್ಮ ಮಗ ರಾಜಕೀಯ ಮಾಡುವುದಕ್ಕೆ ನನ್ನ ತಕರಾರು ಇಲ್ಲ. ಅವರಿಂದ ರಾಜಕೀಯ ಮಾಡಿಸಿ ನಾವು ಬೇಡ ಅನ್ನುವುದಿಲ್ಲ. ಆಶ್ರಯ ಸಮಿತಿ ಸದಸ್ಯರು ಕೆಡಿಪಿ ಸಭೆ ನಡೆಸುವ ಅಧಿಕಾರ ಇರುತ್ತಾ? ಕ್ಷೇತ್ರ ನೋಡಿಕೊಳ್ಳಲು ಆಶ್ರಯ ಸಮಿತಿ ಸದಸ್ಯ ಮಾಡಿದ್ದೇವೆ ಅನ್ನುತ್ತೀರಿ. ನಿವೇಶನ ಕೊಡುವ ಕುರಿತು ಆಶ್ರಯ ಕಮಿಟಿ ಸದಸ್ಯ ಸಭೆ ಮಾಡಬಹುದು. ಅದನ್ನು ಬಿಟ್ಟು ಕೆಡಿಪಿ ಸಭೆ, ಅಧಿಕಾರಿಗಳ ಸಭೆ ನಡೆಸಬಹುದಾ? ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಪ್ರಶ್ನಿಸಿದರು.
![Demo](https://ainlivenews.com/wp-content/uploads/2023/12/spoorthi-1.jpg)
![](https://ainlivenews.com/wp-content/uploads/2024/01/Ad-Banner-copy-scaled.jpg)