ರಾಮನಗರ: ವಕೀಲರ ಹೋರಾಟಕ್ಕೆ ಕೊನೆಗೂ ಸರ್ಕಾರ ಮಣಿದಿದ್ದು ಐಜೂರು ಠಾಣೆ ಪಿಎಸ್ಐ ಸೈಯದ್ ತನ್ವೀರ್ ಹುಸೇನ್ ಅವರನ್ನು ಅಮಾನತು ಮಾಡಲಾಗಿದೆ. ರಾಮನಗರ ಜಿಲ್ಲಾಡಳಿತ ಕಚೇರಿಯಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಸಿದ ಬಳಿಕ ವಿಧಾನಸೌಧ ಚಲೋಗೆ ವಕೀಲರು ಕರೆ ನೀಡಿದ್ದರು. ವಕೀಲರ ಪ್ರತಿಭಟನೆಗೆ ರಾಜ್ಯಾದ್ಯಂತ ಬೆಂಬಲ ವ್ಯಕ್ತವಾಗುತ್ತಿದ್ದಂತೆ ಎಚ್ಚೆತ್ತ ಸರ್ಕಾರ ಮುಜುಗರ ತಪ್ಪಿಸಿಕೊಳ್ಳಲು ಪಿಎಸ್ಐ ಸೈಯದ್ ತನ್ವೀರ್ ಹುಸೇನ್ ಅವರನ್ನು ಅಮಾನತು ಮಾಡಿದೆ.
ಸಕ್ಕರೆ ಕಾಯಿಲೆ ನಿಯಂತ್ರಣದಲ್ಲಿಡಲು ಇಲ್ಲಿದೆ ನೋಡಿ ಸೂಪರ್ ಮನೆಮದ್ದು..!
ಅಮಾನತು ಆದೇಶದ ಬಗ್ಗೆ ಸದನದಲ್ಲಿ ಗೃಹ ಸಚಿವ ಪರಮೇಶ್ವರ್ ಅವರು ಅಧಿಕೃತವಾಗಿ ಪ್ರಕಟಿಸಲಿದ್ದಾರೆ ಎಂಬ ವಿಚಾರ ತಿಳಿದು ಬಂದಿದೆ. 40 ವಕೀಲರ ವಿರುದ್ಧ ಸುಳ್ಳು ಎಫ್ಐಆರ್ ದಾಖಲಿಸಿದ ಸೈಯದ್ ತನ್ವೀರ್ ಹುಸೇನ್ ಅವರನ್ನು ಅಮಾನತು ಮಾಡಬೇಕೆಂದು ಆಗ್ರಹಿಸಿ ರಾಮನಗರ ವಕೀಲರು ವಾರದಿಂದ ಪ್ರತಿಭಟನೆ ನಡೆಸುತ್ತಿದ್ದರು. ಈ ಪ್ರತಿಭಟನೆಗೆ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಮತ್ತು ವಿಧಾನಸಭೆಯ ವಿಪಕ್ಷ ನಾಯಕ ಅಶೋಕ್ ಬೆಂಬಲ ನೀಡಿ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ನಡೆಸುವಂತೆ ಕರೆ ನೀಡಿದ್ದರು.
ಪಿಎಸ್ಐ ಅಮಾನತು ಯಾಕೆ?
ಉತ್ತರ ಪ್ರದೇಶದ ಜ್ಞಾನವಾಪಿ ಮಸೀದಿ ನೆಲಮಹಡಿಯಲ್ಲಿ ಪೂಜೆ ಸಲ್ಲಿಸಲು ತೀರ್ಪು ನೀಡಿದ ವಾರಾಣಸಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಎಸ್ಡಿಪಿಐ ಕಾರ್ಯಕರ್ತ, ವಕೀಲ ಚಾಂದ್ ಪಾಷಾ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ್ದ.