ಹುಬ್ಬಳ್ಳಿ:- ಬಿಜೆಪಿಯ ರಾಜ್ಯಸಭಾ ಸದಸ್ಯರಾದ ಶ್ರೀ ಲೆಹರ್ಸಿಂಗ್ ಇಂದು ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠಕ್ಕೆ ಭೇಟಿ ನೀಡಿ ಜಗದ್ಗುರುಗಳಾದ ಶ್ರೀ ವಚನಾನಂದ ಸ್ವಾಮೀಜಿ ಅವರ ಜೊತೆ ಚರ್ಚೆ ನಡೆಸಿದರು.
ಬಿಜೆಪಿ ಹೈಕಮಾಂಡ್ ಅವರ ಪ್ರತಿನಿಧಿಯಾಗಿ ಹಲವಾರು ವಿಚಾರಗಳನ್ನ ನಮ್ಮ ಜೊತೆಗೆ ಚರ್ಚೆ ನಡೆಸಿದರು. ಈ ವೇಳೆ ಬಿಜೆಪಿ ಚುನಾವಣಾ ಉಸ್ತುವಾರಿಯಾಗಿರುವ ಶ್ರೀ ರಾಧಾಮೋಹನ್ ಅಗರವಾಲ್ ಅವರು ಜಗದ್ಗುರುಗಳವರ ಜೊತೆ ದೂರವಾಣಿಯಲ್ಲಿ ಮಾತನಾಡಿದರು.
ಅಲ್ಲದೇ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾಲಿ ಉಪಮುಖ್ಯಮಂತ್ರಿಗಳಾದ ಶ್ರೀ ದೇವೇಂದ್ರ ಫಡ್ನವಿಸ್ ಕೂಡ ಜಗದ್ಗುರುಗಳವರ ಜೊತೆ ಚರ್ಚೆ ನಡೆಸಿದರು.
ರಾಧಾಮೋಹನ್ ಅಗರವಾಲ್ ಹಾಗೂ ಶ್ರೀ ದೇವೇಂದ್ರ ಫಡ್ನವಿಸ್ ಅವರ ಜೊತೆಗಿನ ದೂರವಾಣಿ ಚರ್ಚೆಯ ವೇಳೆ ನಮ್ಮ ಜಗದ್ಗುರುಗಳವರು ಬಿಜೆಪಿ ಪಕ್ಷದಿಂದ ಪಂಚಮಸಾಲಿ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡುವಲ್ಲಿ ಆಗಿರುವ ಅನ್ಯಾಯವನ್ನು ಅವರ ಜೊತೆ ಪ್ರಬಲವಾಗಿ ಪ್ರಸ್ತಾಪ ಮಾಡಿದ್ದಾರೆ. ಇದನ್ನ ಮನಗಂಡಿರುವ ಬಿಜೆಪಿ ವರಿಷ್ಠರು ಮುಂಬರುವ ದಿನಗಳಲ್ಲಿ ಜನಪ್ರತಿನಿಧಿಗಳ ಆಯ್ಕೆ ಹಾಗೂ ಪಕ್ಷದ ಹುದ್ದೆಗಳನ್ನು ನೀಡುವಲ್ಲಿ ನಮ್ಮ ಪಂಚಮಸಾಲಿ ಸಮುದಾಯವನ್ನು ಪರಿಗಣಿಸುವುದಾಗಿ ಅವರು ಭರವಸೆ ನೀಡಿದ್ದಾರೆ.
ಈ ಸಂಧರ್ಭದಲ್ಲಿ ಮಾಜಿ ಸಚಿವರಾದ ಶ್ರೀ ಶಂಕರ್ ಪಾಟೀಲ್ ಮುನೇನಕೊಪ್ಪ ಅವರು,ಪ್ರಧಾನ ಧರ್ಮದರ್ಶಿ ಶ್ರೀ ಬಿ.ಸಿ.ಉಮಾಪತಿಯವರು ಹಾಗೂ ಶ್ರೀ ಚಂದ್ರಶೇಖರ್ ಪೂಜಾರ್ ಅವರು ಉಪಸ್ಥಿತರಿದ್ದರು.