ದೊಡ್ಡಬಳ್ಳಾಪುರ: ಚಿರತೆ ದಾಳಿಗೆ ಎರಡು ಹಸುಗಳು ಬಲಿಯಾಗಿರುವ ಘಟನೆ ತಾಲೂಕಿನ ಮೆಳೇಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚನ್ನಾಪುರ ಗ್ರಾಮದಲ್ಲಿ ತಡರಾತ್ರಿ ನಡೆದಿದೆ. ಮುನಿಕೃಷ್ಣ ಎಂಬುವರಿಗೆ ಸೇರಿದ್ದಾಗಿದ್ದು ಎಂದಿನಂತೆ ಶೆಡ್ ನಲ್ಲಿ ಹಸುಗಳನ್ನು ಕಟ್ಟಿ ಹಾಕಲಾಗಿತ್ತು.
ತಡರಾತ್ರಿ ಚಿರತೆ ದಾಳಿಯಿಂದ ಹಸುಗಳು ಸಾವನ್ನಪ್ಪಿವೆ. ಬೆಲೆ ಬಾಳುವ ಹಸುಗಳನ್ನ ಕಳೆದುಕೊಂಡ ರೈತ ಕಂಗಾಲಾಗಿದ್ದು, ಕೂಡಲೇ ಚಿರತೆಯನ್ನ ಸೆರೆಹಿಡಿಯುವಂತೆ ಸ್ಥಳೀಯರು ಅರಣ್ಯ ಇಲಾಖೆಗೆ ಒತ್ತಾಯಿಸಿದ್ದಾರೆ.