ಬೆಂಗಳೂರು;- ರಾಜಧಾನಿ ಬೆಂಗಳೂರು ನಗರದಲ್ಲಿ ಮತ್ತೊಂದು ಚಿರತೆ ಪ್ರತ್ಯಕ್ಷವಾಗಿ ಮತ್ತೆ ಆತಂಕ ಸೃಷ್ಟಿ ಮಾಡಿದೆ.
ನೈಸ್ ರಸ್ತೆ ಸಮೀಪದ ಚಿಕ್ಕತೋಗೂರು ಬಳಿ ಚಿರತೆ ಪ್ರತ್ಯಕ್ಷವಾಗಿದೆ. ನಿನ್ನೆ ನ4 ರ ಸಂಜೆ 7.40ರ ಸಮಯದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಶನಿವಾರ ಸಂಜೆ ಚಿರತೆ ಮನೆ ಕಂಪೌಂಡ್ ಒಳಗೆ ನುಗ್ಗಿದ್ದು, ಬಾಗಿಲು ಬಳಿ ಬಂದ ಚಿರತೆ ಕಂಡು ಬಾಲಕ ಕಿರುಚಾಡಿದ್ದಾನೆ. ಬಾಲಕನ ಕಿರುಚಾಟಕ್ಕೆ ಚಿರತೆ ಓಡಿ ಹೋಗಿದೆ ಎಂದು ತಿಳಿದು ಬಂದಿದೆ.
![Demo](https://ainlivenews.com/wp-content/uploads/2023/12/spoorthi-1.jpg)
ಕೆ.ಆರ್.ಪುರಂ ಅರಣ್ಯ ವಲಯ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪರಿಶೀಲನೆ ನಡೆಸಿ ಅರಣ್ಯ ಸಿಬ್ಬಂದಿ ಸ್ಥಳದಲ್ಲೇ ಬೀಡು ಬಿಟ್ಟಿದ್ದಾರೆ. ಶನಿವಾರ ಮಳೆ ಬಂದ ಹಿನ್ನೆಲೆಯಲ್ಲಿ ಹೆಜ್ಜೆ ಗುರುತು ಪತ್ತೆಯಾಗಿದೆ.
![](https://ainlivenews.com/wp-content/uploads/2024/01/Ad-Banner-copy-scaled.jpg)