ವಿಜಯಪುರ: ಜೆಡಿಎಸ್ ಪಕ್ಷದಲ್ಲಿ ಇದ್ದಾಗ ಮುಸ್ಲಿಮರ ಓಲೈಕೆ ಮಾಡುತ್ತಿದ್ದ ಶಾಸಕ ಬಸನಗೌಡ ಪಾಟೀಲ ಯತ್ನಾಳ್, ಬಿಜೆಪಿ ಸೇರುತ್ತಲೇ ‘ಹಿಂದೂ ಹುಲಿ’ ಎಂದು ಬಿರುದು ಇರಿಸಿಕೊಂಡು ಓಡಾಡುತ್ತಿದ್ದಾರೆ. ಅವರು ಸಮಾನತೆ ಸಾರಿರುವ ಬಸವನಾಡಿನಲ್ಲಿ ಜನಿಸಿದ್ದಾರೆ ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಬೇಕು ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯತ್ನಾಳರು ಇಸ್ಲಾಂ ಹಾಗೂ ಧರ್ಮಗುರು ತನ್ವೀರ್ ಪೀರಾ ಹಾಶ್ಮಿ ವಿರೋಧಿ ನಡೆ ಅನುಸರಿಸುತ್ತಾ ಬಂದಿದ್ದಾರೆ.
ಅವರ ಮುಸ್ಲಿಂ ದ್ವೇಷದಿಂದಲೇ ಈಚೆಗೆ ಹುಬ್ಬಳ್ಳಿಯಲ್ಲಿ ನಡೆದ ಕಾರ್ಯಕ್ರಮದ ನೆಪ ಮಾಡಿಕೊಂಡು ಧರ್ಮಗುರು ತನ್ವೀರ್ ಪೀರಾ ಹಾಶ್ಮಿ ವಿರುದ್ಧ ಐಸಿಸ್ ಸಂಪರ್ಕದ ಆರೋಪ ಮಾಡಿರುವುದಲ್ಲದೆ, ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ- ಮೌಲ್ವಿ ಜೊತೆಗಿನ ಫೋಟೋ ಹಾಕಿ ವೈರಲ್ ಮಾಡಿಸಿದ್ದಾರೆ. ಹೀಗೆ ಯತ್ನಾಳ ಅನಗತ್ಯವಾಗಿ ಮತ್ತೊಬ್ಬರ ಚಾರಿತ್ರ್ಯಹರಣದಂಥ ಹೀನಕೃತ್ಯ ಮಾಡಬಾರದು. ಅವರಿಗದು ಶೋಭೆ ತರುವುದಿಲ್ಲ ಎಂದು ವಾಗ್ದಾಳಿ ನಡೆಸಿದರು.
Samantha: ಜೀನ್ಸ್’ನಲ್ಲಿ ನೆವರ್ ಬಿಪೋರ್ ಎಂಬಂತೆ ಬೋಲ್ಡ್ ಲುಕ್ಸ್ ಕೊಟ್ಟ ಸಮಂತಾ..! ಫೋಟೋಸ್ ನೋಡಿ
ಇನ್ನು, ಈ ವಿಷಯದ ತನಿಖೆಗೆ ರಾಜ್ಯ ಸರ್ಕಾರದ ಅನುಮತಿ ಬೇಕಿಲ್ಲ. ತಾಕತ್ತಿದ್ದರೆ ಯತ್ನಾಳರೇ ಎನ್ಐಎ ಮೂಲಕವೋ, ಇಲ್ಲವೆ ಅವರೇ ನೇರವಾಗಿ ಅಮಿತ್ ಶಾ ಬಳಿ ತೆರಳಿ ಕೇಂದ್ರದಿಂದಲೇ ತನಿಖೆ ಮಾಡಿಸಲಿ. ಒಂದೊಮ್ಮೆ ತನ್ವೀರ್ ಪೀರಾ ವಿರುದ್ಧ ಆರೋಪ ಸಾಬೀತಾಗದಿದ್ದರೆ ಅವರಾಗ ಏನು ಮಾಡುತ್ತಾರೆ ಎಂದು ಈಗಲೇ ಸ್ಪಷ್ಟವಾಗಿ ಹೇಳಲಿ ಎಂದವರು ಸವಾಲು ಎಸೆದರು.