ಬೆಂಗಳೂರು:– ನ್ಯಾಯವು ಮೇಲುಗೈ ಸಾಧಿಸಲಿ ಎಂದು ಹೇಳುವ ಮೂಲಕ ರೇಣುಕಾಸ್ವಾಮಿ ಪ್ರಕರಣದ ಬಗ್ಗೆ ದರ್ಶನ್ ಪತ್ನಿ ಪ್ರತಿಕ್ರಿಯೆ ನೀಡಿದ್ದಾರೆ.
ದರ್ಶನ್ ಗ್ಯಾಂಗ್ನ ಮತ್ತೊಂದು ಪೈಶಾಚಿಕ ಕೃತ್ಯ ಬಯಲಿಗೆ.. ರೇಣುಕಾಸ್ವಾಮಿಯ ಕಿವಿ ಕತ್ತರಿಸಿ, ಮನಬಂದಂತೆ ಹಲ್ಲೆ!
ದರ್ಶನ್ ಅರೆಸ್ಟ್ ಆದ ಬಳಿಕ ವಿಜಯಲಕ್ಷ್ಮಿ ಸೈಲೆಂಟ್ ಆಗಿದ್ರೂ ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇವರ ಹೇಳಿಕೆ ಕೂಡ ಪೊಲೀಸರು ಪಡೆದುಕೊಂಡಿದ್ದಾರೆ. ಈ ಬೆನ್ನಲ್ಲೇ ಸೋಷಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯಿಸಿ, ಮೃತ ರೇಣುಕಾಸ್ವಾಮಿಗೆ ಸಂತಾಪವನ್ನು ಸೂಚಿಸುತ್ತೇನೆ. ನನ್ನ ಹದಿಹರೆಯದ ಮಗ ಹಾಗೂ ಕುಟುಂಬಕ್ಕೆ ದುಃಖ ತಂದಿದೆ
ನನ್ನ ಹಾಗೂ ನನ್ನ ಮಗನ ವಿರುದ್ಧ ಸುಳ್ಳು ಮಾಹಿತಿ ಹಾಗೂ ಅಸತ್ಯಗಳನ್ನ ಸೋಶಿಯಲ್ ಮೀಡಿಯಾದಲ್ಲಿ ಹಾಕುವುದನ್ನು ತಡೆಯಬೇಕಾಗಿದೆ. ಅಧಿಕೃತ ಪ್ರಕಟಣೆಯನ್ನು ಮಾತ್ರ ಪ್ರಕಟಿಸುವಂತೆ ನಾನು ಕೇಳಿಕೊಳ್ಳುತ್ತೇನೆ ಎಂದಿದ್ದಾರೆ. ತಾಯಿ ಚಾಮುಂಡೇಶ್ವರಿ ಹಾಗೂ ಕಾನೂನು ವ್ಯವಸ್ಥೆಯಲ್ಲಿ ನನಗೆ ಸಂಪೂರ್ಣ ನಂಬಿಕೆ ಇದೆ. ನ್ಯಾಯವು ಮೇಲುಗೈ ಸಾಧಿಸಲಿ. ‘ಸತ್ಯಮೇವ ಜಯತೆ’ ಎಂದು ದರ್ಶನ್ ಪತ್ನಿ ಬರೆದುಕೊಂಡಿದ್ದಾರೆ