ಹುಬ್ಬಳ್ಳಿ ಮೇ.9: ನೈಸರ್ಗಿಕ ವಿಕೋಪಗಳು ಹಾಗೂ ತುರ್ತು ಸಂದರ್ಭಗಳಲ್ಲಿ ಎನ್.ಎಸ್.ಎಸ್ ಸ್ವಯಂ ಸೇವಕರು ಸೇವೆ ಮಾಡಿದ್ದಾರೆ. ಎನ್.ಎಸ್.ಎಸ್ ಸ್ವಯಂ ಸೇವಕರು ಸಾಮಾಜಿಕ ಸೇವೆ ಮಾಡುವಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವಲ್ಲಿ ಮುಂದಾಗಬೇಕು ಎಂದು ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಜಿ.ಎಸ್.ಸಂಗ್ರೇಶಿ ಹೇಳಿದರು. ಇಂದು ನವನಗರದ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ರಾಜ್ಯ ಎನ್.ಎಸ್.ಎಸ್. ಕೋಶ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ,
ಎನ್ಎಸ್.ಎಸ್.ನ ಪ್ರಾದೇಶಿಕ ನಿರ್ದೇಶನಾಲಯ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಸಹಯೋಗದೊಂದಿಗೆ ಆಯೋಜಿಸಿದ್ದ 2024 ನೇ ಸಾಲಿನ ರಾಷ್ಟಿçÃಯ ಭಾವೈಕ್ಯತಾ ಶಿಬಿರವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜೊತೆಗೆ ಸಮಾಜಕ್ಕೆ ಕೊಡುಗೆ ನೀಡಲು ಮುಂದಾಗಬೇಕು. ಉತ್ತಮ ಶಿಕ್ಷಣದ ಮೂಲಕ ಸಮಾಜದಲ್ಲಿ ಮಹತ್ತರ ಬದಲಾವಣೆ ತರಬಹುದು.
ಶಿಕ್ಷಕರು ಮತ್ತು ವಿದ್ಯಾರ್ಥಿಗಳ ನಡುವೆ ಅವಿನಾಭಾವ ಸಂಬAಧವನ್ನು ಹೊಂದಬೇಕಾಗಿದೆ. ಪ್ರೊ.ಎಂ.ಬಿ.ದಿಲ್ಷಾದ್ ಅವರು ಎನ್.ಎಸ್.ಎಸ್ನ ಬೆಳವಣಿಗೆಗೆ ಬಹಳ ಶ್ರಮಿಸಿದ್ದಾರೆ. ರಾಷ್ಟ್ರೀಯ ಭಾವೈಕ್ಯತಾ ಶಿಬಿರವು ವಿದ್ಯಾರ್ಥಿಗಳನ್ನು ಒಗ್ಗೂಡಿಸುತ್ತಿದೆ. ಈ ಶಿಬಿರದಲ್ಲಿ ಬೇರೆ ಬೇರೆ ರಾಜ್ಯದ 150ಕ್ಕೂ ಅಧಿಕ ಎನ್.ಎಸ್.ಎಸ್ ಶಿಬಿರಾರ್ಥಿಗಳು ಭಾಗವಹಿಸಿದ್ದಾರೆ. ಎಲ್ಲರಿಗೂ ಜೀವನದಲ್ಲಿ ಯಶಸ್ಸು ದೊರೆಯಲಿ ಎಂದು ಹಾರೈಸಿದರು. ರಾಜ್ಯ ಎನ್.ಎಸ್.ಎಸ್. ಕೋಶದ ರಾಜ್ಯ ಎನ್.ಎಸ್.ಎಸ್ ಅಧಿಕಾರಿಗಳಾದ ಡಾ.ಪ್ರತಾಪ್ ಲಿಂಗಯ್ಯ ಮಾತನಾಡಿ, ಈ ವರ್ಷದಲ್ಲಿ 10 ಸಾವಿರ ಎನ್.ಎಸ್.ಎಸ್. ಸ್ವಯಂ ಸೇವಕರನ್ನು ಹೊಂದಿದ ಗುರಿ ಮುಟ್ಟಲಾಗಿದೆ.
ವಿವಿಧ ಸಂಸ್ಕೃತಿಗಳ ಸಂಗಮವನ್ನು ಭಾರತದಲ್ಲಿ ಕಾಣಬಹುದು. ಬೇರೆ ಬೇರೆ ಧರ್ಮಗಳು ಇಲ್ಲಿದ್ದರೂ ಸಹ ವಿವಿಧತೆಯಲ್ಲಿ ಏಕತೆಯನ್ನು ಹೊಂದಲಾಗಿದೆ. ಆಹಾರ ಪದ್ಧತಿ, ವೇಷಭೂಷಣ, ಭಾಷೆಗಳು ಸಹ ಸಾಕಷ್ಟಿದ್ದರೂ ನಾವೆಲ್ಲರೂ ಒಂದಾಗಿದ್ದೇವೆ. ದೇಶದಲ್ಲಿ ಜಾತೀಯತೆ, ಕೋಮು ಗಲಭೆ, ಭಾಷಾ ತಾರತಮ್ಯ ಸೇರಿದಂತೆ ವಿವಿಧ ಸಮಸ್ಯೆಗಳನ್ನು ಏದುರಿಸಬೇಕಾಗಿದೆ. ಶಿಬಿರಾರ್ಥಿಗಳು ಎಲ್ಲವನ್ನೂ ಮರೆತು ಎನ್.ಎಸ್.ಎಸ್ ಶಿಬಿರದಲ್ಲಿ ಪಾಲ್ಗೊಳ್ಳುತ್ತಾರೆ. ವಿದ್ಯಾರ್ಥಿಗಳನ್ನು ಸಮಾಜದಲ್ಲಿ ಜವಾಬ್ದಾರಿಯುತ ನಾಗರೀಕರನ್ನಾಗಿ ಮಾಡುವಲ್ಲಿ ಎನ್.ಎಸ್.ಎಸ್ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಅವರು ತಿಳಿಸಿದರು.
ಬೆಂಗಳೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ಪ್ರೊ. (ಡಾ.)ಸತೀಶಗೌಡ ಎನ್ ಮಾತನಾಡಿ, ಪ್ರತಿಯೊಬ್ಬರು ಸಮಾಜದಲ್ಲಿನ ಸಮಸ್ಯೆಗಳನ್ನು ಪರಿಹರಿಸಲು ಮುಂದಾಗಬೇಕು. ನಾಗರೀಕರು ತಮ್ಮ ಕರ್ತವ್ಯಗಳ ಬಗ್ಗೆ ಅರ್ಥೈಸಿಕೊಳ್ಳಬೇಕಿದೆ. ದೇಶಕ್ಕಾಗಿ ಸೇವೆ ಸಲ್ಲಿಸಲು ಎನ್.ಎಸ್.ಎಸ್ ಉತ್ತಮ ವೇದಿಕೆಯಾಗಿದೆ. ಪ್ರಶಸ್ತಿಗಳು ನಿಮ್ಮನ್ನು ಹುಡುಕಿಕೊಂಡು ಬರಬೇಕೇ ಹೊರತು ಪ್ರಶಸ್ತಿಗಾಗಿ ಸೇವೆ ಸಲ್ಲಿಸಬಾರದು. ಜನರಿಗೆ ತಿಳುವಳಿಕೆ ಮೂಡಿಸಲು ಎನ್.ಎಸ್.ಎಸ್ ಮುಖ್ಯ ವೇದಿಕೆಯಾಗಿರುತ್ತದೆ. ಗ್ರಾಮಗಳ ಉದ್ಧಾರ, ಪರಿಸರ ಅಭಿವೃದ್ಧಿ ಉದ್ದೇಶವನ್ನು ಎನ್.ಎಸ್.ಎಸ್ ಹೊಂದಿದೆ. ಗ್ರಾಮಗಳ ಅಭಿವೃದ್ಧಿಯಾದರೆ ಮಾತ್ರ ದೇಶ ಅಭಿವೃದ್ಧಿ ಹೊಂದಲು ಸಾಧ್ಯ. ಅತಿಯಾದ ಮೊಬೈಲ್ ಬಳಕೆಯಿಂದ ದುಷ್ಪರಿಣಾಮಗಳು ಆಗುತ್ತಿವೆ ಎಂದರು.
ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ.ಸಿ. ಬಸವರಾಜು ಅಧ್ಯಕ್ಷತೆ ವಹಿಸಿ ಮಾತನಾಡಿ, ಉತ್ತಮ ಸಮಾಜ ನಿರ್ಮಾಣಕ್ಕೆ ಎನ್.ಎಸ್.ಎಸ್ ಅವಶ್ಯಕವಾಗಿದೆ. ನಾವೆಲ್ಲರೂ ಒಂದು ಎನ್ನುವ ಭಾವನೆ ನಮ್ಮೆಲ್ಲರಲ್ಲಿ ಮೂಡಬೇಕಿದೆ. ಎಲ್ಲರಲ್ಲಿ ಸಾಮರಸ್ಯ ಹುಟ್ಟು ಹಾಕುವುದೇ ಎನ್.ಎಸ್.ಎಸ್ ನ ಉದ್ಧೇಶವಾಗಿದೆ. ಸರಿಯಾದ ಶಿಕ್ಷಣದ ಕೊರತೆಯಿಂದ ಸಂವಿಧಾನದ ಆಶಯಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಲಾಗುತ್ತಿಲ್ಲ. ರಾಷ್ಟçದ ಐಕ್ಯತೆಗೆ ಹೆಚ್ಚಿನ ಒತ್ತು ನೀಡಬೇಕು.
ಆರೋಗ್ಯಕರ ಸಮಾಜ ಕಟ್ಟಲು ಮುಂದಾಗಬೇಕು. ಎಲ್ಲಾ ಸಮುದಾಯಗಳನ್ನು ಒಟ್ಟುಗೂಡಿಸುವ ಕೆಲಸಗಳಾಗಬೇಕಿವೆ. ಮೊದಲು ನಾವು ನಮ್ಮ ಜವಾಬ್ದಾರಿಗಳನ್ನು ಅರಿತು ಮುನ್ನೆಡಯಬೇಕಾಗಿದೆ. ಜನರಿಗೆ ತಮ್ಮ ಕರ್ತವ್ಯಗಳನ್ನು ನೆನಪಿಸುವ ನಿಟ್ಟಿನಲ್ಲಿ ಸಂವಿಧಾನದಲ್ಲಿ ಮೂಲಭೂತ ಕರ್ತವ್ಯಗಳನ್ನು ಅಳವಡಿಸಲಾಯಿತು. ಭಾರತೀಯ ಸಂಸ್ಕೃತಿಯನ್ನು ಉಳಿಸಿಕೊಂಡು ಹೋಗಬೇಕಿದೆ. ನಿಸ್ವಾರ್ಥ ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು ಎಂದರು.
ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಡೀನರಾದ ಪ್ರೊ.(ಡಾ.) ಜಿ.ಬಿ.ಪಾಟೀಲ, ಮೌಲ್ಯಮಾಪನ ಕುಲಸಚಿವೆ ಪ್ರೊ.(ಡಾ.) ರತ್ನಾ ಭರಮಗೌಡರ, ಎನ್.ಎಸ್.ಎಸ್ ಸಂಯೋಜಕರಾದ ಐ.ಬಿ.ಬಿರಾದಾರ, ಎನ್.ಎಸ್.ಎಸ್ ಸಹಾಯಕ ಸಂಯೋಜಕರಾದ ದೀಪಾ ಸೇರಿದಂತೆ ವಿವಿಧ ರಾಜ್ಯಗಳ ಎನ್.ಎಸ್.ಎಸ್ ಸಂಯೋಜಕರು, ವಿದ್ಯಾರ್ಥಿಗಳು ಇತರರು ಉಪಸ್ಥಿತರಿದ್ದರು.ಪ್ರಮತಿ ಪ್ರಾರ್ಥಿಸಿ, ಎನ್.ಎಸ್.ಎಸ್ ಗೀತೆಯನ್ನು ಹಾಡಿದರು. ಭುವನೇಶ್ವರಿ ಸ್ವಾಗತಿಸಿ, ಪರಿಚಯಿಸಿದರು. ಅಪರ್ಣಾ ನಿರೂಪಿಸಿದರು. ಮಾನಸಿ ವಂದಿಸಿದರು.