ಬೆಂಗಳೂರು: ಸಿದ್ದರಾಮಯ್ಯ ಅಧಿಕಾರ ಬಿಟ್ಟು ಕೆಳಗೆ ಇಳಿಯಲಿ. 24 ಗಂಟೆಗಳಲ್ಲಿ ಪ್ರಜ್ವಲ್ನನ್ನು ಕಸ್ಟಡಿಗೆ ತೆಗೆದುಕೊಳ್ಳುತ್ತೇನೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಸವಾಲು ಹಾಕಿದರು. ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿಕೆಶಿ ಹೇಳೋದನ್ನ ಯಾರೂ ಗಂಭೀರವಾಗಿ ತಗೋಬೇಡಿ. ರಾಮೇಶ್ವರಂ ಕೆಫೆ ಬಾಂಬ್ ಬ್ಯುಸಿನೆಸ್ ಹಿನ್ನೆಲೆ ಇದೆ ಅಂದರು. ಅದು ಸುಳ್ಳಲ್ವಾ? ಡಿಕೆಶಿ ಮಾತಿಗೆ ನಯಾ ಪೈಸೆ ಇಲ್ಲ.
ಕುಕ್ಕರ್ ಬಾಂಬ್ ಹಾಕಿದವನನ್ನ ಬ್ರದರ್ ಅಂದ್ರು. ಸುಳ್ಳು ಹೇಳೋದ್ರಲ್ಲಿ ನಿಸ್ಸೀಮರು. ಅಮಿತ್ ಶಾ ಪ್ರಜ್ವಲ್ಗೆ ಟಿಕೆಟ್ ಕೊಡಬೇಡಿ ಅಂದಿದ್ದು ಹೇಗೆ ಗೊತ್ತಾಯ್ತು ಇವರಿಗೆ? ಫೋನ್ ಟ್ಯಾಪ್ ಮಾಡಿದ್ದಾರಾ ಡಿಕೆಶಿ? ಅಮಿತ್ ಶಾ ಫೋನ್ ಟ್ಯಾಪ್ ಮಾಡಿದ್ದಾರಾ ಡಿಕೆಶಿ? ಮೂರು ಸ್ಥಾನ ಜೆಡಿಎಸ್ಗೆ ಕೊಡಲಾಗಿತ್ತು. ಪ್ರಜ್ವಲ್ಗೆ ಟಿಕೆಟ್ ಕೊಟ್ಟಿದ್ದು ಜೆಡಿಎಸ್ ಎಂದು ಸ್ಪಷ್ಟಪಡಿಸಿದರು.
![Demo](https://ainlivenews.com/wp-content/uploads/2023/12/spoorthi-1.jpg)
KEA Recruitment: PU ಪಾಸಾದವರಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಉದ್ಯೋಗಾವಕಾಶ.! ತಿಂಗಳಿಗೆ 42 ಸಾವಿರ ಸಂಬಳ
ಕಾನೂನಾತ್ಮಕವಾಗಿ ಪ್ರಜ್ವಲ್ ಈಗ ಕಾಂಗ್ರೆಸ್-ಜೆಡಿಎಸ್ ಮೈತ್ರಿಯ ಸಂಸದ. 2019 ರಲ್ಲಿ ಬೀದಿ ಬೀದಿಗೆ ಹೋಗಿ ಪ್ರಜ್ವಲ್ ಪರ ಕಾಂಗ್ರೆಸ್ನವ್ರೂ ಮತ ಕೇಳಿದ್ರು. ಅವರು ಈಗ ಗೆದ್ದು ಬಂದರೆ ಆಗ ಎನ್ಡಿಎ ಅಭ್ಯರ್ಥಿ. ಆಗ ಬಿಜೆಪಿಗೆ ಮುಜುಗರ ಆಯ್ತೋ ಇಲ್ವೋ ಅಂತ ಪ್ರಶ್ನೆ ಬರುತ್ತೆ ಎಂದು ಡಿಕೆ ಶಿವಕುಮಾರ್ಗೆ ತಿರುಗೇಟು ನೀಡಿದರು.
![](https://ainlivenews.com/wp-content/uploads/2024/01/Ad-Banner-copy-scaled.jpg)