ದಾವಣಗೆರೆ:- ತಾಕತ್ತಿದ್ದರೆ ದೇಶ ಇಬ್ಭಾಗ ಮಾಡಿ ನೋಡೋಣ ಎಂದು ಡಿಕೆ ಸುರೇಶ್ ಗೆ ಪ್ರಮೋದ್ ಮುತಾಲಿಕ್ ಸವಾಲ್ ಹಾಕಿದ್ದಾರೆ.
ದಕ್ಷಿಣ ಭಾರತದ ಕೂಗು ಎತ್ತಬೇಕಾಗುತ್ತದೆ ಎಂಬ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಹೇಳಿಕೆ ವಿಚಾರವಾಗಿ ಮಾತನಾಡಿ, ಈಗಾಗಲೇ ದೇಶ ಇಬ್ಭಾಗಿಸಿ ಪಾಕಿಸ್ತಾನ ನಿರ್ಮಾಣ ಮಾಡಿದ್ದೀರಾ, ನಿಮಗೆ ತಾಕತ್ತಿದ್ದರೆ ಇಬ್ಭಾಗ ಮಾಡಿ ನೋಡೋಣ ಎಂದು ಸವಾಲು ಹಾಕಿದ್ದಾರೆ.
ಕಾಂಗ್ರೆಸ್ ಸಂಸದ ಡಿ.ಕೆ ಸುರೇಶ್ ದೇಶದ್ರೋಹಿ ಹೇಳಿಕೆ ನೀಡಿದ್ದಾರೆ. ಈ ಹಿನ್ನಲೆ ಕೇಂದ್ರ ಗೃಹಸಚಿವರು ಕೂಡಲೇ ಅವರನ್ನು ಜೈಲಿಗೆ ಹಾಕಬೇಕು. ಈಗಾಗಲೇ ಪಾಕಿಸ್ತಾನ, ಬಾಂಗ್ಲಾದೇಶ ರಚಿಸಿ ಅನುಭವಿಸುತ್ತಿದ್ದೇವೆ. ಕೂಡಲೇ ತಮ್ಮ ಹೇಳಿಕೆ ಹಿಂಪಡೆದು ಡಿ.ಕೆ ಸುರೇಶ್ ಕ್ಷಮೆಯಾಚಿಸಲಿ ಎಂದು ಕಿಡಿಕಾರಿದರು.